9:25 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಶ್ರದ್ಧಾ ಭಕ್ತಿಯಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ: ಮನೆಯಲ್ಲಿ ಸುಖ, ಶಾಂತಿ, ಐಶ್ವರ್ಯ ನೆಲೆಸಲು ವಿಶೇಷ ಪೂಜೆ

25/08/2023, 20:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಕೊಟ್ಟಿಗೆಹಾರ, ಬಾಳೂರು ಸುತ್ತಮುತ್ತ ಮಹಿಳೆಯರು ವರಮಹಾಲಕ್ಷ್ಮಿ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಿದರು. ಅತ್ತಿಗೆರೆ ಗೃಹಿಣಿ ಸಾವಿತ್ರಿ ಮಾತನಾಡಿ’ ಲಕ್ಷ್ಮಿ ಶುದ್ದತೆಯ ಸಂಕೇತವಾಗಿದೆ. ಗೃಹಿಣಿಯರು ಬೆಳಿಗ್ಗೆ ಬೇಗನೇ ಎದ್ದು ಮನೆ ಸ್ವಚ್ಚತೆಗೊಳಿಸಿ ರಂಗೋಲಿ ತಳಿರು ತೋರಣಗಳಿಂದ ಲಕ್ಷ್ಮಿಯನ್ನು ಅಲಂಕರಿಸಿ ಶುಭ್ರ ಬಟ್ಟೆ ತೊಟ್ಟು ಮಡಿಯಲ್ಲಿ ನೈವೇದ್ಯ ತಯಾರಿಸಲಾಗುತ್ತದೆ. ಬೆಳಿಗ್ಗೆಯಿಂದ ವೃತ ಆಚರಿಸುವ ಆಚರಣೆಯಿದೆ. ಲಕ್ಷ್ಮಿ ಮುಂದೆ ಹಣ,ಚಿನ್ನ, ಬಳೆ, ಹಣ್ಣು,ವಿವಿಧ ಸಿಹಿ,ಅರಿಶಿಣ,ಕುಂಕುಮ ಇಟ್ಟು ವರ ಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ.ಮನೆಯಲ್ಲಿ ನೆಮ್ಮದಿ, ಶಾಂತಿ, ಸುಖ, ಸಮೃದ್ಧಿ, ಐಶ್ವರ್ಯ ನೆಲೆಸಲು ವರಮಹಾಲಕ್ಷ್ಮಿಯನ್ನು ವಿಶೇಷವಾಗಿ ಪೂಜಿಸಲಾಗುತ್ತದೆ’ ಎಂದರು.


ಕೊಟ್ಟಿಗೆಹಾರದ ಅತ್ತಿಗೆರೆಯ ಸುತ್ತಮುತ್ತಲಿನ ಗೃಹಿಣಿಯರು ಸೇರಿ ವರಮಹಾಲಕ್ಷ್ಮಿ ಪೂಜೆಯನ್ನು ಸಂಭ್ರಮದಿಂದ ಆಚರಿಸಿದರು. ಬಂದ ಗೃಹಿಣಿಯರಿಗೆ ಅರಿಶಿಣ ಕುಂಕುಮ, ಬಳೆ ನೀಡಲಾಯಿತು. ಈ ಸಂದರ್ಭದಲ್ಲಿ ಗೃಹಿಣಿಯರಾದ ಜ್ಯೋತಿ, ಸಾವಿತ್ರಿ, ಪಾರ್ವತಿ ನಾಗೇಶ್,ಲಕ್ಷ್ಮಿ,ವಿನುತ ಪವಿನ್, ದೀಪಾ ನವೀನ್, ಪ್ರತಿಷ್ಠ, ಅಮೃತ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು