12:03 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಕಾಫಿನಾಡಿನ ಏಕೈಕ ಕೈ ಶಾಸಕರಿಗೆ ಬಂಡಾಯದ ಬಿಸಿ: ಶೃಂಗೇರಿ ಕ್ಷೇತ್ರದಲ್ಲಿ ಪಕ್ಷೇತರನಾಗಿ ಸ್ಪರ್ಧಿಸಲು ಕಾಂಗ್ರೆಸ್ ಮುಖಂಡನ ಸಿದ್ಧತೆ

30/03/2023, 12:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.ಕಾಂ

ಕಾಫಿನಾಡು ಚಿಕ್ಕಮಗಳೂರಿನ ಏಕೈಕ ಕಾಂಗ್ರೆಸ್ ಶಾಸಕನ
ವಿರುದ್ಧ “ಕೈ” ಪಾಳಯದಲ್ಲಿ ಬಂಡಾಯದ ಬಾವುಟ ಹಾರಿಸಲಾಗಿದೆ. ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡರಿಗೆ ಬಂಡಾಯದ ಬಿಸಿ ತಟ್ಟಲಾರಂಭಿಸಿದೆ.

ಲಕ್ಷ ಖರ್ಚು ಮಾಡಿದ್ರೆ ನೂರು ಜನಕ್ಕೆ ನೀರು ಕೊಡಬಹುದು.
ಅದನ್ನ ಬಿಟ್ಟು ಶಾಸಕರು ಯಾರ್ದೋ ತೋಟದಲ್ಲಿ 35 ಲಕ್ಷ ಖರ್ಚು ಮಾಡಿ ಚೆಕ್ ಡ್ಯಾಂ ನಿರ್ಮಿಸುತ್ತಾರೆ. ಶಾಸಕರಿಂದ ಶೃಂಗೇರಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿ ಮೊಹಮ್ಮದ್
ಇಲಿಯಾಸ್ ಸ್ಪರ್ಧೆಗಿಳಿದಿದ್ದಾರೆ.
ರಾಜೇಗೌಡರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿಯಲು ಅವರು ಸಿದ್ಧತೆ ನಡೆಸಿದ್ದಾರೆ. ಶೃಂಗೇರಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಾಂಗ್ರೆಸ್ ಮುಖಂಡ ಇಲಿಯಾಸ್ ಸ್ಪರ್ಧೆ ನಡೆಸಲು ಎಲ್ಲ ತಯಾರಿ ನಡೆಸಿದ್ದಾರೆ.
ಪಕ್ಷದ ನಡೆಯಿಂದ ಬೇಸತ್ತು ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.
ರಾಜೇಗೌಡರಿಂದ ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಗೋರಿಗಂಡಿಯ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಇಲಿಯಾಸ್ ಚುನಾವಣೆ ಎದುರಿಸುವ ಘೋಷಣೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು