9:41 AM Friday18 - October 2024
ಬ್ರೇಕಿಂಗ್ ನ್ಯೂಸ್
ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ… ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ… ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ… ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಡೆಂಗ್ಯು ಅಟ್ಟಹಾಸ: ಚಿಕ್ಕಮಗಳೂರು ಜಿಲ್ಲೆಯಲ್ಲಿ 350ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ; ಆಸ್ಪತ್ರೆಗಳ ಮುಂದೆ ಜನಜಂಗುಳಿ

11/06/2024, 16:50

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದೇ ಮೊದಲ ಭಾರೀ ಅತೀ ಹೆಚ್ಚು ಪ್ರಕರಣ ದಾಖಲಾಗಿದ್ದು,
ತ್ರಿಶತಕ ದಾಟಿದೆ. ಜಿಲ್ಲೆಯಲ್ಲಿ 350 ಡೆಂಗ್ಯೂ ಪ್ರಕರಣಗಳು ದೃಢ ಪಟ್ಟಿದೆ.

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಲ್ಲಿ ಕಳೆದೊಂದು ದಶಕದಿಂದ ಹಿಂದೆಂದೂ ಕಾಣದ ರೀತಿಯಲ್ಲಿ ಡೆಂಗ್ಯು ಮಹಾಮಾರಿ ತಾಂಡವವಾಡ್ತಿದೆ. ಪ್ರತಿನಿತ್ಯ ಜಿಲ್ಲೆಯಾದ್ಯಂತ ಐದಾರು ಪ್ರಕರಣಗಳು ದಾಖಲಾಗುತ್ತಿದ್ದು, ಸದ್ಯಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ 300ರ ಗಡಿ ದಾಟಿದ್ದು ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ.


ಕಾಫಿನಾಡನ್ನೇ ಕಬ್ಜಾ ಮಾಡಿರೋ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಇಂದಿಗೆ 300ರ ಗಡಿ‌ ದಾಟಿದೆ. ಇದರಿಂದ ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿ ಒಳಗೂ ಜನ, ಹೊರಗೂ ಜನಜಂಗುಳಿ ಸೇರಿದೆ. ಚಕ್ಕಮಗಳೂರು ಜಿಲ್ಲೆಯಲ್ಲಿರುವ ಆಸ್ಪತ್ರೆಗಳ ಮುಂದೆ ಜನಜಂಗುಳಿ
ಕಂಡುಬರುತ್ತಿರುವ ಚಿತ್ರಣವಾಗಿದೆ. ಬರದಿಂದ ಕಂಗೆಟ್ಟಿದ್ದ ಜಿಲ್ಲೆಯಲ್ಲಿ ಸದ್ಯಕ್ಕೆ ಉತ್ತಮ ಮಳೆಯಾಗುತ್ತಿದೆ. ಈ ಮಧ್ಯೆ ಡೆಂಗ್ಯೂ ಪ್ರಕರಣಗಳ ರುದ್ರನರ್ತನ ಕೂಡ ದಿನದಿಂದ ದಿನಕ್ಕೆ ಜಿಲ್ಲೆಯನ್ನ ಕಾಡುತ್ತಿದೆ. ಚಿಕ್ಕಮಗಳೂರು ತಾಲೂಕು ಒಂದರಲ್ಲೇ 250 ಪ್ರಕರಣಗಳಿದ್ದು ಜಿಲ್ಲೆಯಾದ್ಯಂತ 350 ಡೆಂಗ್ಯೂ ಪ್ರಕರಣಗಳು ತಾಂಡವವಾಡುತ್ತಿದೆ. ಅದೂ ಕಳೆದ ಎರಡು ತಿಂಗಳಲ್ಲೇ ಹೆಚ್ಚು. ಹೆಮ್ಮಾರಿ ಡೆಂಗ್ಯೂ ಈ ಪರಿ ಅಟ್ಯಾಕ್ ಮಾಡಿರೋದು ಆರೋಗ್ಯ ಇಲಾಖೆ ತಲೆ ಕೆಡಿಸಿಕೊಳ್ಳುವಂತೆ ಮಾಡಿದೆ. ಜ್ವರ ಕಾಣಿಸಿಕೊಂಡರೆ ಸಾಕು ಡೆಂಗ್ಯೂ ಕಂಫರ್ಮ್ ಅನ್ನುವ ರೀತಿ ಆಗಿದೆ. ಸದ್ಯದ ಸ್ಥಿತಿ-ಗತಿ. ಆದ್ರೆ, ಆರೋಗ್ಯ ಇಲಾಖೆ ಅದೃಷ್ಟವಶಾತ್ ಈವರೆಗೂ ಸಾವು ಸಂಭವಿಸಿಲ್ಲ. ಜ್ವರ ಕಾಣಿಸಿಕೊಂಡರೇ ಮನೆಯಲ್ಲಿ ಔಷಧಿ ತೆಗೆದುಕೊಳ್ಳುವುದಾ ಬಿಟ್ಟು ಆಸ್ಪತ್ರೆ ಬಂದು ಚಿಕಿತ್ಸೆ ಪಡೆಯಿರಿ ಅಂತ ಮನವಿ ಮಾಡಿದ್ದಾರೆ.
*ಮುಂದಿನ ದಿನಗಳಲ್ಲಿ ಬೆಡ್ ಗಳ ಸಮಸ್ಯೆ:* ಇಷ್ಟದ್ರು ಇನ್ನು ಡೆಂಗ್ಯೂ ಪ್ರಕರಣಗಳ ಸಂಖ್ಯೆ ಇಳಿಮುಖದ ಲಕ್ಷಣ ಕಾಣ್ತಿಲ್ಲ. ತರೀಕೆರೆ, ಕಡೂರು, ಚಿಕ್ಕಮಗಳೂರು, ಮೂಡಿಗೆರೆ, ಎನ್. ಆರ್. ಪುರ, ಕೊಪ್ಪ ತಾಲೂಕುಗಳಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ. ಒಂದು ದಶಕದ ಬಳಿಕ ಈ ಪರಿ ಮಹಾಮಾರಿ ಹರಡಿದ್ದು ಇದೇ ಮೊದಲು. ಬೇಸಿಗೆ ಅವಧಿಯಲ್ಲಿ ಮಳೆ ಇಲ್ಲದೆ ಚರಂಡಿ, ಮೋರಿ-ಕಾಲುವೆಗಳಲ್ಲಿ ನೀರು ನಿಂತು ಸೊಳ್ಳೆಗಳ ಲಾರ್ವ ಪ್ರಮಾಣ ಹೆಚ್ಚಾಗಿ ಸೊಳ್ಳೆಗಳ ಕಾಟವು ಜಿಲ್ಲೆಯಲ್ಲಿ ಮಿತಿ ಮೀರಿದೆ. ಇದರ ಪರಿಣಾಮ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಲು ಕಾರಣ ಅಂತಾರೆ ವೈದ್ಯರು. ಜೊತೆಗೆ ವಾರಕ್ಕೊಮ್ಮೆ ನೀರು ಬರುತ್ತೆ ಅಂತ ನೀರನ್ನ ಶೇಖರಿಸಿಕೊಂಡು ಮುಚ್ಚದೆ ಇರೋದ್ರಿಂದಲೂ ಡೆಂಗ್ಯೂ ಬಂದಿದೆ ಅನ್ನೋದು ವೈದ್ಯರ ಸ್ಪಷ್ಟನೆ. ರೋಗದಿಂದ ಆಸ್ಪತ್ರೆಗೆ ದಾಖಲಾದ ರೋಗಿಗಳನ್ನು ಅವಶ್ಯಕತೆ ಇದ್ದರೆ ಮಾತ್ರ ಅಡ್ಮಿಟ್ ಮಾಡಿಕೊಳ್ಳಲಾಗುತ್ತಿದ್ದು, ಉಳಿದವರನ್ನು ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟಾರೆ, ಡೆಂಗ್ಯೂ ಆತಂಕ ಬೇಡ, ಎಚ್ಚರವಿರಲಿ ಎನ್ನುವ ಸಂದೇಶವನ್ನು ಚಿಕ್ಕಮಗಳೂರು ಆರೋಗ್ಯ ಇಲಾಖೆ ನೀಡುತ್ತಿದ್ದು, ಸೊಳ್ಳೆಗಳಿಂದ ಸೂಕ್ತ ರಕ್ಷಣೆ ಪಡೆಯಲು ಜನರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುತ್ತಿದೆ. ಆದರೂ, ಈ ಪರಿ ಡೆಂಗ್ಯೂ ಮಹಾಮಾರಿ ಜಿಲ್ಲೆಯನ್ನು ಕಾಡುತ್ತಿದ್ದು ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮತ್ತಷ್ಟು ಎಚ್ಚೆತ್ತುಕೊಳ್ಳುವ ಅವಶ್ಯಕತೆ ಇದೆ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬೆಡ್ ಗಳ ಸಮಸ್ಯೆ ಎದುರಾದರು ಆಶ್ಚರ್ಯವಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು