4:22 PM Wednesday25 - February 2026
ಬ್ರೇಕಿಂಗ್ ನ್ಯೂಸ್
ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಕಾಡುಕೋಣ ದಾಳಿಗೆ 73ರ ಹರೆಯದ ವೃದ್ದ ದಾರುಣ ಸಾವು: ತೋಟದಲ್ಲಿ ನಡೆದ ದುರ್ಘಟನೆ

06/02/2025, 20:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡುಕೋಣ ದಾಳಿಗೆ ವೃದ್ಧರೊಬ್ಬರು ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನ ಹಳುವಳ್ಳಿ ಸಮೀಪದ ಲಲಿತಾದ್ರಿ ಗ್ರಾಮದಲ್ಲಿ ನಡೆದಿದೆ.
ರಘುಪತಿ (73) ಕಾಡುಕೋಣದ ದಾಳಿಗೆ ಸಾವನ್ನಪ್ಪಿದ್ದ ಕೃಷಿಕ. ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಕಾಡುಕೋಣ ದಾಳಿ ಮಾಡಿತ್ತು. ತೋಟಕ್ಕೆ ಹೋಗಿದ್ದ ರಘುಪತಿಯವರು
ಫೋನ್ ರಿಸೀವ್ ಮಾಡದಿದ್ದಾಗ ಮನೆಯವರು
ತೋಟಕ್ಕೆ ಹುಡುಕಿಕೊಂಡು ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಮಧ್ಯಾಹ್ನ ಮನೆಯಿಂದ ಕಾಫಿ ತೋಟಕ್ಕೆ ರಘುಪತಿ ಅವರು ತೆರಳಿದ್ದರು. ತೋಟದ ಸುತ್ತ 6 ಅಡಿ ಬೇಲಿ ಮಾಡಿದ್ರು ಅದನ್ನ ದಾಟಿ ಕಾಡುಕೋಣ ಬಂದಿದೆ.

ಕಾಡುಕೋಣ ದಾಳಿಯಿಂದ ಕೃಷಿಕನ ಸಾವಿಗೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿರಂತರ ಕಾಡುಕೋಣ ಹಾವಳಿಂದ ಬೆಳೆಗಾರರು, ಸ್ಥಳಿಯರು ಕಂಗಾಲಾಗಿದ್ದಾರೆ.
ರಸ್ತೆಗಳಲ್ಲಿಯೂ ಕಾಡು ಕೋಣಗಳು ಅಡ್ಡಲಾಗಿ ನಿಲ್ಲುತ್ತವೆ.ಹಲವು ಬಾರಿ ಮನವಿ ಮಾಡಿದ್ರು ಅರಣ್ಯ ಇಲಾಖೆ ಕ್ರಮಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು