2:25 PM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಕಾಡುಕೋಣ ದಾಳಿಗೆ 73ರ ಹರೆಯದ ವೃದ್ದ ದಾರುಣ ಸಾವು: ತೋಟದಲ್ಲಿ ನಡೆದ ದುರ್ಘಟನೆ

06/02/2025, 20:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡುಕೋಣ ದಾಳಿಗೆ ವೃದ್ಧರೊಬ್ಬರು ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನ ಹಳುವಳ್ಳಿ ಸಮೀಪದ ಲಲಿತಾದ್ರಿ ಗ್ರಾಮದಲ್ಲಿ ನಡೆದಿದೆ.
ರಘುಪತಿ (73) ಕಾಡುಕೋಣದ ದಾಳಿಗೆ ಸಾವನ್ನಪ್ಪಿದ್ದ ಕೃಷಿಕ. ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಕಾಡುಕೋಣ ದಾಳಿ ಮಾಡಿತ್ತು. ತೋಟಕ್ಕೆ ಹೋಗಿದ್ದ ರಘುಪತಿಯವರು
ಫೋನ್ ರಿಸೀವ್ ಮಾಡದಿದ್ದಾಗ ಮನೆಯವರು
ತೋಟಕ್ಕೆ ಹುಡುಕಿಕೊಂಡು ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಮಧ್ಯಾಹ್ನ ಮನೆಯಿಂದ ಕಾಫಿ ತೋಟಕ್ಕೆ ರಘುಪತಿ ಅವರು ತೆರಳಿದ್ದರು. ತೋಟದ ಸುತ್ತ 6 ಅಡಿ ಬೇಲಿ ಮಾಡಿದ್ರು ಅದನ್ನ ದಾಟಿ ಕಾಡುಕೋಣ ಬಂದಿದೆ.

ಕಾಡುಕೋಣ ದಾಳಿಯಿಂದ ಕೃಷಿಕನ ಸಾವಿಗೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿರಂತರ ಕಾಡುಕೋಣ ಹಾವಳಿಂದ ಬೆಳೆಗಾರರು, ಸ್ಥಳಿಯರು ಕಂಗಾಲಾಗಿದ್ದಾರೆ.
ರಸ್ತೆಗಳಲ್ಲಿಯೂ ಕಾಡು ಕೋಣಗಳು ಅಡ್ಡಲಾಗಿ ನಿಲ್ಲುತ್ತವೆ.ಹಲವು ಬಾರಿ ಮನವಿ ಮಾಡಿದ್ರು ಅರಣ್ಯ ಇಲಾಖೆ ಕ್ರಮಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು