1:40 AM Monday30 - June 2025
ಬ್ರೇಕಿಂಗ್ ನ್ಯೂಸ್
ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಮತ್ತೆ ನಕ್ಸಲ್ ಚಟುವಟಿಕೆ?: ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಆರಂಭ

12/11/2024, 19:36

ಸಂತೋಷ್ ಅತ್ತಿಗೆರೆbಚಿಕ್ಕಮಗಳೂರು

info.reporterkarnataka@gmail.com

ದಶಕಗಳ ಬಳಿಕ ಕಾಫಿನಾಡಿನ ಮಲೆನಾಡು ಪ್ರದೇಶದಲ್ಲಿ ನಕ್ಸಲ್‌ ಚಟುವಟಿಕೆಯ ಗುಮಾನಿ ಹಿನ್ನೆಲೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಕೂಂಬಿಂಗ್ ಶುರುವಾಗಿದೆ.
ನಕ್ಸಲ್ ನಿಗ್ರಹ ಪಡೆಯಿಂದ ತನಿಖೆ ಚುರುಕುಗೊಂಡಿದ್ದು, ಕೂಬಿಂಗ್ ಆರಂಭಿಸಲಾಗಿದೆ.
ಕಳಸ, ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಕೂಂಬಿಂಗ್ ನಡೆಸಲಾಗುವುದು. ದಟ್ಟ ಕಾನನದ ಮಧ್ಯೆಯಲ್ಲಿ ನಕ್ಸಲರಿಗಾಗಿ ತೀವ್ರ ಶೋಧ ನಡೆದಿದೆ. ಎಎನ್ಎಫ್ ಪಡೆ ಡಾಗ್ ಸ್ಕ್ವಾಡ್ ಬಳಸಿಕೊಂಡು ಕೂಂಬಿಂಗ್ ತೀವ್ರಗೊಳಿಸಿದೆ.
ಕೊಪ್ಪ ಕಾಡಂಚಿನ ಗ್ರಾಮದ ಇಬ್ಬರನ್ನು ಬಂಧಿಸಿ ಎಸ್ಪಿ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.
ನಕ್ಸಲ್ ಮಾಹಿತಿದಾರರೆಂದು ಕೊಪ್ಪ ತಾಲೂಕಿನ ಎಡಗುಂದ ಗ್ರಾಮದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಮಲೆನಾಡ ಸಮಸ್ಯೆ ಮುಂದಿಟ್ಟುಕೊಂಡು ನಕ್ಸಲರು ಗ್ರಾಮಸ್ಥರ ಸಂಪರ್ಕ ಮಾಡಿದ್ದ ಅನುಮಾನ ಉಂಟಾಗಿದೆ.
ಕಳೆದ ವಾರ ಶೃಂಗೇರಿ ತಾಲೂಕಿನ ಕಾಡಂಚಿನ ಗ್ರಾಮಕ್ಕೆ 6 ಜನ ಅಪರಿಚಿತರು ಬಂದಿದ್ದರು ಎನ್ನಲಾಗಿದೆ. ನಿನ್ನೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು