6:41 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಮತ್ತೆ ನಕ್ಸಲ್ ಚಟುವಟಿಕೆ?: ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಆರಂಭ

12/11/2024, 19:36

ಸಂತೋಷ್ ಅತ್ತಿಗೆರೆbಚಿಕ್ಕಮಗಳೂರು

info.reporterkarnataka@gmail.com

ದಶಕಗಳ ಬಳಿಕ ಕಾಫಿನಾಡಿನ ಮಲೆನಾಡು ಪ್ರದೇಶದಲ್ಲಿ ನಕ್ಸಲ್‌ ಚಟುವಟಿಕೆಯ ಗುಮಾನಿ ಹಿನ್ನೆಲೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಕೂಂಬಿಂಗ್ ಶುರುವಾಗಿದೆ.
ನಕ್ಸಲ್ ನಿಗ್ರಹ ಪಡೆಯಿಂದ ತನಿಖೆ ಚುರುಕುಗೊಂಡಿದ್ದು, ಕೂಬಿಂಗ್ ಆರಂಭಿಸಲಾಗಿದೆ.
ಕಳಸ, ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಕೂಂಬಿಂಗ್ ನಡೆಸಲಾಗುವುದು. ದಟ್ಟ ಕಾನನದ ಮಧ್ಯೆಯಲ್ಲಿ ನಕ್ಸಲರಿಗಾಗಿ ತೀವ್ರ ಶೋಧ ನಡೆದಿದೆ. ಎಎನ್ಎಫ್ ಪಡೆ ಡಾಗ್ ಸ್ಕ್ವಾಡ್ ಬಳಸಿಕೊಂಡು ಕೂಂಬಿಂಗ್ ತೀವ್ರಗೊಳಿಸಿದೆ.
ಕೊಪ್ಪ ಕಾಡಂಚಿನ ಗ್ರಾಮದ ಇಬ್ಬರನ್ನು ಬಂಧಿಸಿ ಎಸ್ಪಿ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.
ನಕ್ಸಲ್ ಮಾಹಿತಿದಾರರೆಂದು ಕೊಪ್ಪ ತಾಲೂಕಿನ ಎಡಗುಂದ ಗ್ರಾಮದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಮಲೆನಾಡ ಸಮಸ್ಯೆ ಮುಂದಿಟ್ಟುಕೊಂಡು ನಕ್ಸಲರು ಗ್ರಾಮಸ್ಥರ ಸಂಪರ್ಕ ಮಾಡಿದ್ದ ಅನುಮಾನ ಉಂಟಾಗಿದೆ.
ಕಳೆದ ವಾರ ಶೃಂಗೇರಿ ತಾಲೂಕಿನ ಕಾಡಂಚಿನ ಗ್ರಾಮಕ್ಕೆ 6 ಜನ ಅಪರಿಚಿತರು ಬಂದಿದ್ದರು ಎನ್ನಲಾಗಿದೆ. ನಿನ್ನೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು