5:41 AM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಮತ್ತೆ ನಕ್ಸಲ್ ಚಟುವಟಿಕೆ?: ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಆರಂಭ

12/11/2024, 19:36

ಸಂತೋಷ್ ಅತ್ತಿಗೆರೆbಚಿಕ್ಕಮಗಳೂರು

info.reporterkarnataka@gmail.com

ದಶಕಗಳ ಬಳಿಕ ಕಾಫಿನಾಡಿನ ಮಲೆನಾಡು ಪ್ರದೇಶದಲ್ಲಿ ನಕ್ಸಲ್‌ ಚಟುವಟಿಕೆಯ ಗುಮಾನಿ ಹಿನ್ನೆಲೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಕೂಂಬಿಂಗ್ ಶುರುವಾಗಿದೆ.
ನಕ್ಸಲ್ ನಿಗ್ರಹ ಪಡೆಯಿಂದ ತನಿಖೆ ಚುರುಕುಗೊಂಡಿದ್ದು, ಕೂಬಿಂಗ್ ಆರಂಭಿಸಲಾಗಿದೆ.
ಕಳಸ, ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಕೂಂಬಿಂಗ್ ನಡೆಸಲಾಗುವುದು. ದಟ್ಟ ಕಾನನದ ಮಧ್ಯೆಯಲ್ಲಿ ನಕ್ಸಲರಿಗಾಗಿ ತೀವ್ರ ಶೋಧ ನಡೆದಿದೆ. ಎಎನ್ಎಫ್ ಪಡೆ ಡಾಗ್ ಸ್ಕ್ವಾಡ್ ಬಳಸಿಕೊಂಡು ಕೂಂಬಿಂಗ್ ತೀವ್ರಗೊಳಿಸಿದೆ.
ಕೊಪ್ಪ ಕಾಡಂಚಿನ ಗ್ರಾಮದ ಇಬ್ಬರನ್ನು ಬಂಧಿಸಿ ಎಸ್ಪಿ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.
ನಕ್ಸಲ್ ಮಾಹಿತಿದಾರರೆಂದು ಕೊಪ್ಪ ತಾಲೂಕಿನ ಎಡಗುಂದ ಗ್ರಾಮದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಮಲೆನಾಡ ಸಮಸ್ಯೆ ಮುಂದಿಟ್ಟುಕೊಂಡು ನಕ್ಸಲರು ಗ್ರಾಮಸ್ಥರ ಸಂಪರ್ಕ ಮಾಡಿದ್ದ ಅನುಮಾನ ಉಂಟಾಗಿದೆ.
ಕಳೆದ ವಾರ ಶೃಂಗೇರಿ ತಾಲೂಕಿನ ಕಾಡಂಚಿನ ಗ್ರಾಮಕ್ಕೆ 6 ಜನ ಅಪರಿಚಿತರು ಬಂದಿದ್ದರು ಎನ್ನಲಾಗಿದೆ. ನಿನ್ನೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು