9:25 PM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಮತ್ತೆ ನಕ್ಸಲ್ ಚಟುವಟಿಕೆ?: ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಆರಂಭ

12/11/2024, 19:36

ಸಂತೋಷ್ ಅತ್ತಿಗೆರೆbಚಿಕ್ಕಮಗಳೂರು

info.reporterkarnataka@gmail.com

ದಶಕಗಳ ಬಳಿಕ ಕಾಫಿನಾಡಿನ ಮಲೆನಾಡು ಪ್ರದೇಶದಲ್ಲಿ ನಕ್ಸಲ್‌ ಚಟುವಟಿಕೆಯ ಗುಮಾನಿ ಹಿನ್ನೆಲೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಕೂಂಬಿಂಗ್ ಶುರುವಾಗಿದೆ.
ನಕ್ಸಲ್ ನಿಗ್ರಹ ಪಡೆಯಿಂದ ತನಿಖೆ ಚುರುಕುಗೊಂಡಿದ್ದು, ಕೂಬಿಂಗ್ ಆರಂಭಿಸಲಾಗಿದೆ.
ಕಳಸ, ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಕೂಂಬಿಂಗ್ ನಡೆಸಲಾಗುವುದು. ದಟ್ಟ ಕಾನನದ ಮಧ್ಯೆಯಲ್ಲಿ ನಕ್ಸಲರಿಗಾಗಿ ತೀವ್ರ ಶೋಧ ನಡೆದಿದೆ. ಎಎನ್ಎಫ್ ಪಡೆ ಡಾಗ್ ಸ್ಕ್ವಾಡ್ ಬಳಸಿಕೊಂಡು ಕೂಂಬಿಂಗ್ ತೀವ್ರಗೊಳಿಸಿದೆ.
ಕೊಪ್ಪ ಕಾಡಂಚಿನ ಗ್ರಾಮದ ಇಬ್ಬರನ್ನು ಬಂಧಿಸಿ ಎಸ್ಪಿ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.
ನಕ್ಸಲ್ ಮಾಹಿತಿದಾರರೆಂದು ಕೊಪ್ಪ ತಾಲೂಕಿನ ಎಡಗುಂದ ಗ್ರಾಮದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಮಲೆನಾಡ ಸಮಸ್ಯೆ ಮುಂದಿಟ್ಟುಕೊಂಡು ನಕ್ಸಲರು ಗ್ರಾಮಸ್ಥರ ಸಂಪರ್ಕ ಮಾಡಿದ್ದ ಅನುಮಾನ ಉಂಟಾಗಿದೆ.
ಕಳೆದ ವಾರ ಶೃಂಗೇರಿ ತಾಲೂಕಿನ ಕಾಡಂಚಿನ ಗ್ರಾಮಕ್ಕೆ 6 ಜನ ಅಪರಿಚಿತರು ಬಂದಿದ್ದರು ಎನ್ನಲಾಗಿದೆ. ನಿನ್ನೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು