1:12 AM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಾಫಿನಾಡ ಬರಕ್ಕೆ ಮತ್ತೊಬ್ಬ ಬಲಿ: ಮಳೆ ಇಲ್ಲದೆ ಬೆಳೆ ನಾಶಕ್ಕೆ ಮನನೊಂದು ಅಜ್ಜಂಪುರ ರೈತ ಆತ್ಮಹತ್ಯೆ

01/09/2023, 15:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಎರಡು ದಿನದಲ್ಲಿ ಇಬ್ಬರು ರೈತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಳೆ ಇಲ್ಲದೆ ಬೆಳೆನಾಶವಾಗಿ ಸಾಲದ ಶೂಲಕ್ಕೆ ಸಿಲುಕಿದ ಅಜ್ಜಂಪುರ ತಾಲೂಕಿನ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ನಹತ್ಯೆ ಮಾಡಿಕೊಂಡ ರೈತನನ್ನು ಅಜ್ಜಂಪುರ ತಾಲೂಕಿನ ಚಿಕ್ಕನಲ್ಲೂರು ಗ್ರಾಮದ ಪರಮೇಶ್ವರಪ್ಪ (52) ಎಂದು ಗುರುತಿಸಲಾಗಿದೆ.

ಪರಮೇಶ್ವರ ಅವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು 3 ಎಕರೆ ಜಮೀನನಲ್ಲಿ ಹಾಕಿದ್ದ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿದೆ. ಅವರು ಬ್ಯಾಂಕ್, ಬಡ್ಡಿ ಹಾಗೂ ಕೈಸಾಲ ಸೇರಿ 5 ಲಕ್ಷ ಸಾಲ ಮಾಡಿದ್ದರು.ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ಗಿರಿಯಾಪುರದ ರೈತ ಸತೀಶ್ ಆತ್ಮಹತ್ಯೆಗೆ ಶರಣಾಗಿದ್ದರು. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು