9:13 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಗೌರಿಹಬ್ಬ; ಕಾಫಿನಾಡಿನಲ್ಲಿ ವಿಶೇಷ ಗಂಗಾ ಪೂಜೆ, ಬಾಗಿನ ಸಮರ್ಪಿಸಿದ ಮಹಿಳೆಯರು, ಮಕ್ಕಳು

30/08/2022, 21:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಬಣಕಲ್, ಬಾಳೂರು, ಕೊಟ್ಟಿಗೆಹಾರ ಸುತ್ತಮುತ್ತ ಮಹಿಳೆಯರು, ಮಕ್ಕಳು ವಿಶೇಷ ಗಂಗೆ ಪೂಜೆ ನಡೆಸಿ ಬಾಗಿನ ಅರ್ಪಿಸಿ ಗೌರಿಹಬ್ಬ ಆಚರಿಸಿದರು.

ದೇವನಗೂಲ್ ಗ್ರಾಮದಲ್ಲಿ ಪೂಜೆ ನೆರವೇರಿಸಿ ಮಾತನಾಡಿದ ಗೃಹಿಣಿ ಯಶೋದಮ್ಮ, ಹಿಂದು ಸಂಪ್ರದಾಯದಲ್ಲಿ ವಿಶೇಷವಾಗಿ ಮಲೆನಾಡಿನ ಭಾಗದಲ್ಲಿ ಗೌರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಬ್ಬ ಮಹಿಳೆಯರ ಪಾಲಿಗೆ ಶ್ರೇಷ್ಠ ಹಬ್ಬವಾಗಿದೆ. ರಂಗೋಲಿಯ ಚಿತ್ತಾರ, ಸುಮಂಗಲಿಯರಿಗೆ ಹದಿನಾರು ಸುತ್ತಿನ ಗೌರಿ ದಾರ ಪೂಜಿಸಿ ಕೈಗೆ ಕಟ್ಟಿಕೊಳ್ಳುತ್ತಾರೆ. ಗೌರಿ ಹಬ್ಬದಂದು ಸುಮಂಗಲಿಯರಿಗೆ ನೀಡುವ ಬಾಗಿನ ಅತಿ ಶ್ರೇಷ್ಠವಾದುದು. ಅದಕ್ಕೆಂದೇ ಐದು ಮುತ್ತೈದೆಯರಿಗೆ ಈ ದಿನ ಬಾಗಿನ ನೀಡುವ ಸಂಪ್ರದಾಯವಿದೆ. ಅರಿಶಿಣ ಕುಂಕುಮ, ಹಸಿರುಬಳೆ, ಕರಿಮಣಿ ಬಾಚಣಿಗೆ, ಸೀರೆ ಅಥವಾ ಬ್ಲೌಸ್ ಪೀಸ್, ಕಾಯಿ ಹಣ್ಣು ಧಾನ್ಯಗಳನ್ನೊಳಗೊಂಡ ಬಾಗಿನ ನೀಡುವುದರಿಂದ ದಾನ ಮಾಡುವ ಪುಣ್ಯ ಲಭಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ದೇವನಗೂಲ್ ಗ್ರಾಮದ ಗೃಹೀನಿಯರಾದ ಸುಶೀಲಮ್ಮ, ಸೌಮ್ಯ, ಸುಧಾ, ಜಯಂತಿ, ಶ್ವೇತಾ, ಕುಸುಮ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು