4:32 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಗೌರಿಹಬ್ಬ; ಕಾಫಿನಾಡಿನಲ್ಲಿ ವಿಶೇಷ ಗಂಗಾ ಪೂಜೆ, ಬಾಗಿನ ಸಮರ್ಪಿಸಿದ ಮಹಿಳೆಯರು, ಮಕ್ಕಳು

30/08/2022, 21:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಬಣಕಲ್, ಬಾಳೂರು, ಕೊಟ್ಟಿಗೆಹಾರ ಸುತ್ತಮುತ್ತ ಮಹಿಳೆಯರು, ಮಕ್ಕಳು ವಿಶೇಷ ಗಂಗೆ ಪೂಜೆ ನಡೆಸಿ ಬಾಗಿನ ಅರ್ಪಿಸಿ ಗೌರಿಹಬ್ಬ ಆಚರಿಸಿದರು.

ದೇವನಗೂಲ್ ಗ್ರಾಮದಲ್ಲಿ ಪೂಜೆ ನೆರವೇರಿಸಿ ಮಾತನಾಡಿದ ಗೃಹಿಣಿ ಯಶೋದಮ್ಮ, ಹಿಂದು ಸಂಪ್ರದಾಯದಲ್ಲಿ ವಿಶೇಷವಾಗಿ ಮಲೆನಾಡಿನ ಭಾಗದಲ್ಲಿ ಗೌರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಬ್ಬ ಮಹಿಳೆಯರ ಪಾಲಿಗೆ ಶ್ರೇಷ್ಠ ಹಬ್ಬವಾಗಿದೆ. ರಂಗೋಲಿಯ ಚಿತ್ತಾರ, ಸುಮಂಗಲಿಯರಿಗೆ ಹದಿನಾರು ಸುತ್ತಿನ ಗೌರಿ ದಾರ ಪೂಜಿಸಿ ಕೈಗೆ ಕಟ್ಟಿಕೊಳ್ಳುತ್ತಾರೆ. ಗೌರಿ ಹಬ್ಬದಂದು ಸುಮಂಗಲಿಯರಿಗೆ ನೀಡುವ ಬಾಗಿನ ಅತಿ ಶ್ರೇಷ್ಠವಾದುದು. ಅದಕ್ಕೆಂದೇ ಐದು ಮುತ್ತೈದೆಯರಿಗೆ ಈ ದಿನ ಬಾಗಿನ ನೀಡುವ ಸಂಪ್ರದಾಯವಿದೆ. ಅರಿಶಿಣ ಕುಂಕುಮ, ಹಸಿರುಬಳೆ, ಕರಿಮಣಿ ಬಾಚಣಿಗೆ, ಸೀರೆ ಅಥವಾ ಬ್ಲೌಸ್ ಪೀಸ್, ಕಾಯಿ ಹಣ್ಣು ಧಾನ್ಯಗಳನ್ನೊಳಗೊಂಡ ಬಾಗಿನ ನೀಡುವುದರಿಂದ ದಾನ ಮಾಡುವ ಪುಣ್ಯ ಲಭಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ದೇವನಗೂಲ್ ಗ್ರಾಮದ ಗೃಹೀನಿಯರಾದ ಸುಶೀಲಮ್ಮ, ಸೌಮ್ಯ, ಸುಧಾ, ಜಯಂತಿ, ಶ್ವೇತಾ, ಕುಸುಮ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು