4:07 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಗೌರಿಹಬ್ಬ; ಕಾಫಿನಾಡಿನಲ್ಲಿ ವಿಶೇಷ ಗಂಗಾ ಪೂಜೆ, ಬಾಗಿನ ಸಮರ್ಪಿಸಿದ ಮಹಿಳೆಯರು, ಮಕ್ಕಳು

30/08/2022, 21:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಬಣಕಲ್, ಬಾಳೂರು, ಕೊಟ್ಟಿಗೆಹಾರ ಸುತ್ತಮುತ್ತ ಮಹಿಳೆಯರು, ಮಕ್ಕಳು ವಿಶೇಷ ಗಂಗೆ ಪೂಜೆ ನಡೆಸಿ ಬಾಗಿನ ಅರ್ಪಿಸಿ ಗೌರಿಹಬ್ಬ ಆಚರಿಸಿದರು.

ದೇವನಗೂಲ್ ಗ್ರಾಮದಲ್ಲಿ ಪೂಜೆ ನೆರವೇರಿಸಿ ಮಾತನಾಡಿದ ಗೃಹಿಣಿ ಯಶೋದಮ್ಮ, ಹಿಂದು ಸಂಪ್ರದಾಯದಲ್ಲಿ ವಿಶೇಷವಾಗಿ ಮಲೆನಾಡಿನ ಭಾಗದಲ್ಲಿ ಗೌರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಬ್ಬ ಮಹಿಳೆಯರ ಪಾಲಿಗೆ ಶ್ರೇಷ್ಠ ಹಬ್ಬವಾಗಿದೆ. ರಂಗೋಲಿಯ ಚಿತ್ತಾರ, ಸುಮಂಗಲಿಯರಿಗೆ ಹದಿನಾರು ಸುತ್ತಿನ ಗೌರಿ ದಾರ ಪೂಜಿಸಿ ಕೈಗೆ ಕಟ್ಟಿಕೊಳ್ಳುತ್ತಾರೆ. ಗೌರಿ ಹಬ್ಬದಂದು ಸುಮಂಗಲಿಯರಿಗೆ ನೀಡುವ ಬಾಗಿನ ಅತಿ ಶ್ರೇಷ್ಠವಾದುದು. ಅದಕ್ಕೆಂದೇ ಐದು ಮುತ್ತೈದೆಯರಿಗೆ ಈ ದಿನ ಬಾಗಿನ ನೀಡುವ ಸಂಪ್ರದಾಯವಿದೆ. ಅರಿಶಿಣ ಕುಂಕುಮ, ಹಸಿರುಬಳೆ, ಕರಿಮಣಿ ಬಾಚಣಿಗೆ, ಸೀರೆ ಅಥವಾ ಬ್ಲೌಸ್ ಪೀಸ್, ಕಾಯಿ ಹಣ್ಣು ಧಾನ್ಯಗಳನ್ನೊಳಗೊಂಡ ಬಾಗಿನ ನೀಡುವುದರಿಂದ ದಾನ ಮಾಡುವ ಪುಣ್ಯ ಲಭಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ದೇವನಗೂಲ್ ಗ್ರಾಮದ ಗೃಹೀನಿಯರಾದ ಸುಶೀಲಮ್ಮ, ಸೌಮ್ಯ, ಸುಧಾ, ಜಯಂತಿ, ಶ್ವೇತಾ, ಕುಸುಮ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು