8:32 AM Thursday24 - July 2025
ಬ್ರೇಕಿಂಗ್ ನ್ಯೂಸ್
ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.… ಐಟಿಐ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜತೆ ರಾಜ್ಯ… ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಸಚಿವ ಡಾ. ಶರಣಪ್ರಕಾಶ್‌… Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ! ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ದಶಕದ ಬಳಿಕ ಮತ್ತೆ ನಕ್ಸಲ್ ಸದ್ದು:? ಇಬ್ಬರು ಶಂಕಿತ ವ್ಯಕ್ತಿಗಳ ಬಂಧನ; ನಾಡ ಬಂದೂಕು ವಶ

11/11/2024, 20:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದಶಕಗಳ ಬಳಿಕ ಕಾಫಿನಾಡಿನ‌ ಮಲೆನಾಡು ಭಾಗದಲ್ಲಿ ಮತ್ತೆ ನಕ್ಸಲರ ಸದ್ದು ಕೇಳಲಾರಂಭಿಸಿದೆ. ಇಬ್ಬರು ಶಂಕಿತ ವ್ಯಕ್ತಿಗಳನ್ನು ನಕ್ಸಲ್ ನಿಗ್ರಹ ಪಡೆ (ಎಎನ್ ಎಫ್) ತೀವ್ರ ವಿಚಾರಣೆಗೊಳಪಡಿಸಿದ್ದು, ನಾಡ ಬಂದೂಕು ವಶಪಡಿಸಿಕೊಳ್ಳಲಾಗಿದೆ.
2014ರ ನಂತರ ಮಲೆನಾಡಲ್ಲಿ ಮೊದಲ ಬಾರಿಗೆ ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ.
ಮಲೆನಾಡಿಗೆ ಆವರಿಸಿದ ಒತ್ತುವರಿ ತೆರೆವು ಹಾಗೂ ಕಸ್ತೂರಿ ರಂಗನ್ ವರದಿ ಭಯದ ಹಿನ್ನೆಲೆಯಲ್ಲಿ ನಕ್ಸಲ್ ಚಟುವಟಿಕೆಗೆ ಮತ್ತೆ ಜೀವ ಬಂದಿದೆ ಎನ್ನಲಾಗಿದೆ. ಈ ಎಲ್ಲ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಶಂಕಿತ ನಕ್ಸಲರು ಗ್ರಾಮಸ್ಥರ ಸಂಪರ್ಕ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.
ನಕ್ಸಲ್ ನಿಗ್ರಹ ಪಡೆ ಕೊಪ್ಪ ತಾಲೂಕಿನ ಗಡಿ ಭಾಗದ ಗ್ರಾಮದ ಈ ಇಬ್ಬರು ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ. ಕೊಪ್ಪ ತಾಲೂಕಿನ ಯಡಗುಂದ ಮೂಲದ ವ್ಯಕ್ತಿಗಳು ಇವರಾಗಿದ್ದಾರೆ. ಇಬ್ಬರಿಗೆ ಸಂಬಂಧಿಸಿದ ಸ್ಥಳದಲ್ಲಿ ಎಎನ್ ಎಫ್ ಟೀಂ ಶೋಧ ನಡೆಸಿದೆ. ನಾಡ ಬಂದೂಕು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಶೃಂಗೇರಿ ಪೊಲೀಸ್ ಠಾಣೆಗೆ ಕರೆತಂದು ಇಬ್ಬರ ವಿಚಾರಣೆ ನಡೆಸಲಾಗಿದೆ. ನಕ್ಸಲ್ ನಿಗ್ರಹ ಪಡೆಯಿಂದ ಮಲೆನಾಡಲ್ಲಿ ತೀವ್ರ ಶೋಧ ಕಾರ್ಯ ಆರಂಭವಾಗಿದೆ. ಎಎನ್ ಎಫ್ ಎಸ್ಪಿ ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು