1:40 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ದಶಕದ ಬಳಿಕ ಮತ್ತೆ ನಕ್ಸಲ್ ಸದ್ದು:? ಇಬ್ಬರು ಶಂಕಿತ ವ್ಯಕ್ತಿಗಳ ಬಂಧನ; ನಾಡ ಬಂದೂಕು ವಶ

11/11/2024, 20:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದಶಕಗಳ ಬಳಿಕ ಕಾಫಿನಾಡಿನ‌ ಮಲೆನಾಡು ಭಾಗದಲ್ಲಿ ಮತ್ತೆ ನಕ್ಸಲರ ಸದ್ದು ಕೇಳಲಾರಂಭಿಸಿದೆ. ಇಬ್ಬರು ಶಂಕಿತ ವ್ಯಕ್ತಿಗಳನ್ನು ನಕ್ಸಲ್ ನಿಗ್ರಹ ಪಡೆ (ಎಎನ್ ಎಫ್) ತೀವ್ರ ವಿಚಾರಣೆಗೊಳಪಡಿಸಿದ್ದು, ನಾಡ ಬಂದೂಕು ವಶಪಡಿಸಿಕೊಳ್ಳಲಾಗಿದೆ.
2014ರ ನಂತರ ಮಲೆನಾಡಲ್ಲಿ ಮೊದಲ ಬಾರಿಗೆ ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ.
ಮಲೆನಾಡಿಗೆ ಆವರಿಸಿದ ಒತ್ತುವರಿ ತೆರೆವು ಹಾಗೂ ಕಸ್ತೂರಿ ರಂಗನ್ ವರದಿ ಭಯದ ಹಿನ್ನೆಲೆಯಲ್ಲಿ ನಕ್ಸಲ್ ಚಟುವಟಿಕೆಗೆ ಮತ್ತೆ ಜೀವ ಬಂದಿದೆ ಎನ್ನಲಾಗಿದೆ. ಈ ಎಲ್ಲ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಶಂಕಿತ ನಕ್ಸಲರು ಗ್ರಾಮಸ್ಥರ ಸಂಪರ್ಕ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.
ನಕ್ಸಲ್ ನಿಗ್ರಹ ಪಡೆ ಕೊಪ್ಪ ತಾಲೂಕಿನ ಗಡಿ ಭಾಗದ ಗ್ರಾಮದ ಈ ಇಬ್ಬರು ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ. ಕೊಪ್ಪ ತಾಲೂಕಿನ ಯಡಗುಂದ ಮೂಲದ ವ್ಯಕ್ತಿಗಳು ಇವರಾಗಿದ್ದಾರೆ. ಇಬ್ಬರಿಗೆ ಸಂಬಂಧಿಸಿದ ಸ್ಥಳದಲ್ಲಿ ಎಎನ್ ಎಫ್ ಟೀಂ ಶೋಧ ನಡೆಸಿದೆ. ನಾಡ ಬಂದೂಕು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಶೃಂಗೇರಿ ಪೊಲೀಸ್ ಠಾಣೆಗೆ ಕರೆತಂದು ಇಬ್ಬರ ವಿಚಾರಣೆ ನಡೆಸಲಾಗಿದೆ. ನಕ್ಸಲ್ ನಿಗ್ರಹ ಪಡೆಯಿಂದ ಮಲೆನಾಡಲ್ಲಿ ತೀವ್ರ ಶೋಧ ಕಾರ್ಯ ಆರಂಭವಾಗಿದೆ. ಎಎನ್ ಎಫ್ ಎಸ್ಪಿ ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು