4:03 AM Saturday4 - April 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಹೊಸ ಧಾರಾವಾಹಿ’ದೃಷ್ಟಿಬೊಟ್ಟು’ ಸೆಪ್ಟೆಂಬರ್ 9ರಿಂದ

05/09/2024, 14:25

ಮಂಗಳೂರು(reporterkarnataka.com): ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ. ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ನಿಮ್ಮ ಮನಸೂರೆಗೊಳ್ಳಲು ಕಾದಿದ್ದಾರೆ. ‘ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದು ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಮತ್ತೊಂದು ಹೆಗ್ಗಳಿಕೆ ಎಂದು ಕಲರ್ಸ್ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು