6:52 AM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಹೊಸ ಧಾರಾವಾಹಿ’ದೃಷ್ಟಿಬೊಟ್ಟು’ ಸೆಪ್ಟೆಂಬರ್ 9ರಿಂದ

05/09/2024, 14:25

ಮಂಗಳೂರು(reporterkarnataka.com): ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ. ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ನಿಮ್ಮ ಮನಸೂರೆಗೊಳ್ಳಲು ಕಾದಿದ್ದಾರೆ. ‘ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದು ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಮತ್ತೊಂದು ಹೆಗ್ಗಳಿಕೆ ಎಂದು ಕಲರ್ಸ್ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು