4:26 PM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಹೊಸ ಧಾರಾವಾಹಿ’ದೃಷ್ಟಿಬೊಟ್ಟು’ ಸೆಪ್ಟೆಂಬರ್ 9ರಿಂದ

05/09/2024, 14:25

ಮಂಗಳೂರು(reporterkarnataka.com): ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ. ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ನಿಮ್ಮ ಮನಸೂರೆಗೊಳ್ಳಲು ಕಾದಿದ್ದಾರೆ. ‘ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದು ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಮತ್ತೊಂದು ಹೆಗ್ಗಳಿಕೆ ಎಂದು ಕಲರ್ಸ್ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು