5:18 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಹೊಸ ಧಾರಾವಾಹಿ’ದೃಷ್ಟಿಬೊಟ್ಟು’ ಸೆಪ್ಟೆಂಬರ್ 9ರಿಂದ

05/09/2024, 14:25

ಮಂಗಳೂರು(reporterkarnataka.com): ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ. ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ನಿಮ್ಮ ಮನಸೂರೆಗೊಳ್ಳಲು ಕಾದಿದ್ದಾರೆ. ‘ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದು ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಮತ್ತೊಂದು ಹೆಗ್ಗಳಿಕೆ ಎಂದು ಕಲರ್ಸ್ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು