2:29 AM Thursday17 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು

01/04/2026, 20:22

ತುಮಕೂರು(reporterkarnataka.com): ನಾಡಿನ ಪವಿತ್ರ ಧಾರ್ಮಿಕ ಕೇಂದ್ರವಾದ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಠದ ಶಿಸ್ತು ಮತ್ತು ಸೇವೆಯನ್ನು ಕಂಡು ಮನಸಾರೆ ಶ್ಲಾಘಿಸಿದರು. ತಮ್ಮ ಭಾಷಣದ ಆರಂಭದಲ್ಲೇ ಮೂರು ಬಾರಿ ‘ಓಂ ನಮಃ ಶಿವಾಯ’ ಎಂದು ಉದ್ಘರಿಸುವ ಮೂಲಕ ಭಕ್ತರ ಮನ ಗೆದ್ದ ರಾಷ್ಟ್ರಪತಿಗಳು, ಸಹೋದರ ಸಹೋದರಿಯರೇ ನಿಮಗೆ ನನ್ನ ಸಪ್ರೇಮ ವಂದನೆಗಳು ಎಂದು ಕನ್ನಡದಲ್ಲೇ ಮಾತು ಆರಂಭಿಸಿ ಎಲ್ಲರ ಗಮನ ಸೆಳೆದರು.
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿರುವುದು ತಮಗೆ ಅಪಾರ ಸಂತೋಷ ತಂದಿದೆ ಎಂದು ಹಂಚಿಕೊಂಡ ರಾಷ್ಟ್ರಪತಿಗಳು, ಇಲ್ಲಿನ ಸಾಧು-ಸಂತರ ಆಶೀರ್ವಾದ ಪಡೆದದ್ದು ಮತ್ತು ಸಾವಿರಾರು ಮಕ್ಕಳನ್ನು ಭೇಟಿಯಾಗಿದ್ದು ಜೀವನದ ಸೌಭಾಗ್ಯ ಎಂದು ಬಣ್ಣಿಸಿದರು.
ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳನ್ನು ಸ್ಮರಿಸಿದ ಅವರು, ಶ್ರೀಗಳು ದೈಹಿಕವಾಗಿ ಇಂದು ನಮ್ಮೊಂದಿಗಿಲ್ಲದೇ ಇರಬಹುದು, ಆದರೆ ಅವರು ನೀಡಿದ ನಿಸ್ವಾರ್ಥ ಸೇವೆ ಇಂದಿಗೂ ಜನಮಾನಸದಲ್ಲಿ ಜೀವಂತವಾಗಿದೆ. ತಮ್ಮ ಆಧ್ಯಾತ್ಮಿಕ ಜೀವನದಲ್ಲಿ ಶಿವಕುಮಾರ ಶ್ರೀಗಳು ಇಡೀ ಸಮಾಜಕ್ಕೆ ದೊಡ್ಡ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ದ್ರೌಪದಿ ಮುರ್ಮು ಗೌರವ ಸಮರ್ಪಿಸಿದರು.
ಅನಾಥ ಮತ್ತು ಬಡ ಮಕ್ಕಳಿಗೆ ಶಿಕ್ಷಣ, ದಾಸೋಹ ಹಾಗೂ ಆಶ್ರಯ ನೀಡುವ ಮೂಲಕ ಮಠವು ಮಾಡುತ್ತಿರುವ ತ್ರಿವಿಧ ದಾಸೋಹ ಸೇವೆಯನ್ನು ರಾಷ್ಟ್ರಪತಿಗಳು ಮುಕ್ತಕಂಠದಿಂದ ಹೊಗಳಿದರು.
ದೇಶದ ವಿಕಾಸದಲ್ಲಿ ಸಿದ್ದಗಂಗಾ ಮಠದ ಪಾತ್ರ ಅತ್ಯಂತ ದೊಡ್ಡದಿದೆ. ಈ ಮಠವು ಕೇವಲ ಧಾರ್ಮಿಕ ಕೇಂದ್ರವಲ್ಲ, ಬದಲಾಗಿ ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತಾಗಿದೆ ಎಂದು ತಿಳಿಸಿದರು.
ಜಗಜ್ಯೋತಿ ಬಸವಣ್ಣನವರು ಹಾಕಿಕೊಟ್ಟ ದಯೆಯೇ ಧರ್ಮದ ಮೂಲವಯ್ಯ ಎಂಬ ತತ್ವದ ಅಡಿಯಲ್ಲಿ ಸಿದ್ದಗಂಗಾ ಮಠವು ಮುನ್ನಡೆಯುತ್ತಿದೆ. ರಾಷ್ಟ್ರ ನಿರ್ಮಾಣದ ಪವಿತ್ರ ಕಾರ್ಯದಲ್ಲಿ ಈ ಮಠವು ಮುಂಚೂಣಿಯಲ್ಲಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ ಮತ್ತು ಅನ್ನ ನೀಡುವ ಮೂಲಕ ಶ್ರೇಷ್ಠ ಪರಂಪರೆಯನ್ನು ಎತ್ತಿ ಹಿಡಿದಿದೆ. ಮಠದ ಭೇಟಿಯು ತಮಗೆ ಹೊಸ ಚೈತನ್ಯ ನೀಡಿದೆ ಎಂದು ದ್ರೌಪದಿ ಮುರ್ಮು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು