2:18 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಕಾಂಗ್ರೆಸ್‌ ಶಾಸಕರ ಖರೀದಿಗೆ ಕಾಂಗ್ರೆನಲ್ಲೇ ಪೈಪೋಟಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ

22/06/2025, 00:07

ಬಾಗಲಕೋಟೆ(reporterkarnataka.com): ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದ್ದು, ಕಾಂಗ್ರೆಸ್ಸಿನಿಂದ ಕಾಂಗ್ರೆಸ್‌ ಶಾಸಕರ ಖರೀದಿಗೇ ಪೈಪೋಟಿ ನಡೆದಂತಿದೆ. ಅದರ ಪರಿಣಾಮವಾಗಿಯೇ ಶಾಸಕರ ಆಡಿಯೋ ವೈರಲ್‌ ಆಗುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಟಿ ಬೀಸಿದರು.
ಬಾಗಲಕೋಟೆ ಜಿಲ್ಲೆ ಪಟ್ಟದಕಲ್‌ನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಬಹುಶಃ ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಆಗಬಹುದು ಎಂಬ ಚರ್ಚೆ ಕಾಂಗ್ರೆಸ್‌ ಶಾಸಕರಲ್ಲಿ ಹರಿದಾಡುತ್ತಿದೆ. ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್‌ನ ಉಭಯ ಗುಂಪಿನವರು ಬಹುಶಃ ಶಾಸಕರ ಖರೀದಿಗೆ ಪ್ರಯತ್ನ ನಡೆಸಿರಬೇಕು ಎಂದು ಹೇಳಿದರು.
ಆ ಪಕ್ಷದಲ್ಲಿ ನವೆಂಬರ್‌ ನಲ್ಲಿ ಸಿಎಂ ಬದಲಾವಣೆ ಎಂಬ ವದಂತಿ ಇರುವುದರಿಂದ ಸಿಎಂ ಕುರ್ಚಿಗಾಗಿ ಸಿಎಂ-ಡಿಸಿಎಂ ಗುಂಪಿನಲ್ಲಿ ಹಗ್ಗ-ಜಗ್ಗಾಟ ನಡೆದಂತಿದೆ. ತಮ್ಮ ಬಲ ಪ್ರದರ್ಶನಕ್ಕಾಗಿ ಶಾಸಕರ ಖರೀದಿಗೆ ಮುಂದಾಗಿರುವ ಉಭಯ ಗುಂಪಿನವರು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ವೈಯಕ್ತಿಕ ಲಾಭಕ್ಕಾಗಿ ಶಾಸಕರಾದವರಿಗೆ ಇದೊಂದು ʼಗೋಲ್ಡನ್‌ ಅಪಾರ್ಚ್ಯುನಿಟಿʼ ಆಗಿದೆ ಎಂದು ಸಚಿವ ಜೋಶಿ ಟೀಕಿಸಿದರು.
ʼರಾಜೀವ್‌ ಗಾಂಧಿ ವಸತಿ ನಿಗಮದ ಅನುದಾನ ಬಿಡುಗಡೆಗೆ ಲಂಚ ಅನಿವಾರ್ಯʼವಾಗಿರುವ ಬಗ್ಗೆ ವಸತಿ ಸಚಿವ ಜಮೀರ್‌ ಅಹ್ಮದ್‌ ಆಪ್ತ ಕಾರ್ಯದರ್ಶಿ ಜತೆ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್‌.ಪಾಟೀಲ್‌ ಮಾತನಾಡಿರುವ ಆಡಿಯೋ ವೈರಲ್‌ ಆಗಿದೆ. ಅಲ್ಲದೇ, ʼಈ ಆಡಿಯೋದಲ್ಲಿರುವ ಧ್ವನಿ ಸಹ ತಮ್ಮದೇʼ ಎಂದು ಪಾಟೀಲ್‌ ಒಪ್ಪಿಕೊಂಡಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ತಾಲೂಕು ಕಚೇರಿಗಳಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ದಿಢೀರ್‌ ಭೇಟಿ ನೀಡಿದ ವೇಳೆ ʼಯಾವುದಕ್ಕೆ ಎಷ್ಟು ರೇಟ್‌?ʼ ಬೋರ್ಡ್‌ ಹಾಕಿಬಿಡಿʼ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದ ವಿಡಿಯೋ ಸಹ ವೈರಲ್‌ ಆಗಿವೆ. ಇನ್ನು, ಗುತ್ತಿಗೆದಾರರು ಇದು 60 ಪರ್ಸೆಂಟ್‌ ಸರ್ಕಾರ ಏನ್ನುತ್ತಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರ ಪೀಡಿತ ಎಂಬುದಕ್ಕೆ ಇಷ್ಟು ಸಾಕಲ್ಲವೇ ನಿದರ್ಶನ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಹಿಂದೆ ಬಸವರಾಜ ರಾಯರೆಡ್ಡಿ ಅವರು ʼಅತಿ ಹೆಚ್ಚು ಭ್ರಷ್ಟಾಚಾರ ಇರುವುದು ತಮ್ಮ ಸರ್ಕಾರದಲ್ಲಿʼ ಎಂದಿದ್ದರು. ಈಗ ದುಡ್ಡು ಕೊಡದೆ ಬಡವರಿಗೆ ಮನೆ ಸಿಗುವುದಿಲ್ಲ ಎಂಬ ಬಿ.ಆರ್‌.ಪಾಟೀಲರ ಆಡಿಯೋ ವೈರಲ್‌ ಆಗಿದೆ. ಅವರೂ ಆ ಹೇಳಿಕೆಯನ್ನು ಒಪ್ಪಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಈಗೇನು ಹೇಳುತ್ತೀರಿ? ಎಂದು ಸಚಿವ ಜೋಶಿ ಪ್ರಶ್ನಿಸಿದರು.

*ಭ್ರಷ್ಟಾಚಾರದ ಮೊಟ್ಟೆಯಿಟ್ಟು ಮರಿ ಬೆಳೆಸಿದ್ದೇ ಕಾಂಗ್ರೆಸ್‌:*
ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ವರ್ಗಾವಣೆ ದಂಧೆ, ಹಗರಣವೇ ನಡೆಯುತ್ತಿದೆ ಎಂದು ಸ್ವತಃ ಕಾಂಗ್ರೆಸ್‌ ಶಾಸಕರೇ ಹೇಳುತ್ತಿದ್ದಾರೆ. ಭ್ರಷ್ಟಾಚಾರದ ಮೊಟ್ಟೆಯಿಟ್ಟು ಮರಿ ಬೆಳೆಸಿದ್ದೇ ಕಾಂಗ್ರೆಸ್‌ ಪಕ್ಷ. ಯುಪಿಎ ಸರ್ಕಾರದಲ್ಲಿ ₹12 ಲಕ್ಷ ಕೋಟಿ ಭ್ರಷ್ಟಾಚಾರ ನಡೆದಿತ್ತು. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಬೇಲ್‌ ಮೇಲಿದ್ದಾರೆ. ಹೀಗಾಗಿ ರಾಜ್ಯ ಕಾಂಗ್ರೆಸ್ಸಿಗರಿಗೆ ಹೇಳೋರು-ಕೇಳೋರು ಯಾರೂ ಇಲ್ಲವೆಂದು ವಾಗ್ದಾಳಿ ನಡೆಸಿದರು.

*ಗೃಹಲಕ್ಷ್ಮಿ ವಿಳಂಬಕ್ಕೆ ಕೇಂದ್ರ ಕಾರಣ ಎನ್ನುವುದು ಹಾಸ್ಯಾಸ್ಪದ:*
ರಾಜ್ಯದಲ್ಲಿ ಗೃಹಲಕ್ಷ್ಮಿ ಹಣ ಜನರಿಗೆ ಸರಿಯಾಗಿ ತಲುಪುತ್ತಿಲ್ಲ. ಇದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದಿದ್ದಾರೆ. ಇದು ಶೋಭೆ ತರದು. ಪುಣ್ಯಕ್ಕೆ ಇಲ್ಲಿ ಹೆಚ್ಚು ಮಳೆಯಾಗಿದೆ. ಇದಕ್ಕೂ ಕೇಂದ್ರ ಕಾರಣವೆಂದಿಲ್ಲ ಎಂದು ಜೋಶಿ ಲೇವಡಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು