6:41 AM Friday12 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಕಂಪ್ಯೂಟರ್ ಪರೀಕ್ಷೆ ಪಾಸಾಗಿಲ್ಲವೇ?: ಹಾಗಾದರೆ ಸರಕಾರಿ ಸಿಬ್ಬಂದಿಗಳಿಗಿಲ್ಲ ಪ್ರಮೋಶನ್, ವಾರ್ಷಿಕ ವೇತನ ಬಡ್ತಿ

11/06/2022, 09:21

ಬೆಂಗಳೂರು(reporterkarnataka.com): ನಿಮ್ಮ ಹುದ್ದೆ ದೊಡ್ಡದೇ? ಸಿಕ್ಕಾಪಟ್ಟೆ ವೇತನವಿದೆಯೇ? ಕಂಪ್ಯೂಟರ್ ಗೊತ್ತಿಲ್ಲವೇ? 

ಸಹಾಯಕರನ್ನಿಟ್ಟುಕೊಂಡು ಕೆಲಸ ಮಾಡಿಸುತ್ತಿದ್ದೀರಾ? ಹಾಗಾದರೆ ಸರಕಾರದ ಹೊಸ ಆದೇಶದ ಪ್ರಕಾರ ನಿಮಗಿನ್ನು ಕಷ್ಟದ ದಿನಗಳು ಎದುರಾಗಲಿದೆ.

ಯಾಕೆಂದರೆ ಸರಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯವಾಗಿ ಉತ್ತೀರ್ಣರಾಗಬೇಕು, ಇಲ್ಲವಾದಲ್ಲಿ ಮುಂಬಡ್ತಿ, ವಾರ್ಷಿಕ ವೇತನ ಬಡ್ತಿಗೆ ಅರ್ಹರಾಗಿರುವುದಿಲ್ಲ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆಗೆದುಕೊಳ್ಳದಿರುವ ಬಗ್ಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಪರೀಕ್ಷೆ ತೆಗೆದುಕೊಳ್ಳದ ಅಧಿಕಾರಿಗಳು ಮತ್ತು ನೌಕರರ ಮಾಹಿತಿ ಕಲೆಹಾಕಿ ಸರ್ಕಾರಕ್ಕೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.

ಸುಮಾರು 5.40 ಲಕ್ಷ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಬೇಕು ಎಂದು ಸರ್ಕಾರ ಆದೇಶ ನೀಡಿದ್ದು, ಸುಮಾರು 2.50 ಲಕ್ಷಕ್ಕೂ ಅಧಿಕ ಅಧಿಕಾರಿಗಳು ಮತ್ತು ನೌಕರರು ಬರೆದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ 1,73,500 ಅಧಿಕಾರಿಗಳು, ನೌಕರರು ಉತ್ತೀರ್ಣರಾಗಿದ್ದಾರೆ.

ಇನ್ನೂ ಸುಮಾರು 3.5 ಲಕ್ಷ ಸರ್ಕಾರಿ ನೌಕರರು ಪರೀಕ್ಷೆ ತೆಗೆದುಕೊಳ್ಳಬೇಕಾಗಿದ್ದು, ಸರ್ಕಾರಿ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಮಾಡಿಕೊಳ್ಳಲು ಡಿಸೆಂಬರ್ 31 ರ ವರೆಗೆ ಗಡುವು ನೀಡಲಾಗಿದೆ. ಈ ಅವಧಿಯೊಳಗೆ ಉತ್ತೀರ್ಣರಾಗದ ನೌಕರರು ಮತ್ತು ಅಧಿಕಾರಿಗಳು ಮುಂಬಡ್ತಿ, ವಾರ್ಷಿಕ ವೇತನ ಬಡ್ತಿಗೆ ಅರ್ಹರಾಗಿರುವುದಿಲ್ಲ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು