5:49 AM Monday24 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ಕಾಂಗ್ರೆಸಿಗರು ಜನ ಸೇರಿಸೋದು, ಮೋದಿಗೆ ಜನ ಸೇರೋದು: ಪ್ರಜಾಧ್ವನಿ ಯಾತ್ರೆಗೆ ಸಿ.ಟಿ. ರವಿ ಟೀಕೆ

21/01/2023, 21:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@ಜಿಮೈಲ್

ಕಾಂಗ್ರೆಸ್ಸಿಗರು ಜನ ಸೇರಿಸೋದು, ಪ್ರಧಾನಿ ಮೋದಿಗೆ ಜನ ಸೇರೋದು ಎಂದು ಕಾಂಗ್ರೆಸ್ಸಿನ ಪ್ರಜಾಧ್ವನಿ ಯಾತ್ರೆಗೆ ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು,
ಮೋದಿ ಬರ್ತಾರೆ ಅಂದ್ರೆ ಲಕ್ಷ-ಲಕ್ಷ ಜನ ಸೇರುತ್ತಾರೆ, ಸೇರೋದಕ್ಕೂ, ಸೇರ್ಸೋದಕ್ಕೂ ವ್ಯತ್ಯಾಸವಿದೆ.

ಸೇರ್ಸೋದು ಹಲವು ಕಾರಣಕ್ಕೆ, ಸೇರೋದು ಪ್ರೀತಿಗೆ ಮಾತ್ರ ಎಂದರು.
ಪ್ರಜೆಗಳ ಬಲ ಮೋದಿಯವರ ಜೊತೆ ಇದೆ.
ಆದರೆ, ಕಾಂಗ್ರೆಸ್ ಪ್ರಜೆಗಳ ಧ್ವನಿಯನ್ನ ಅವರು ಕೇಳಬೇಕು, ಅವರ ಧ್ವನಿಯನ್ನ ಪ್ರಜೆಗಳಿಗೆ ಕೇಳಿಸುತ್ತಿದ್ದಾರೆ. ಪಿ.ಎಫ್.ಐ. ಕಾರ್ಯಕರ್ತರನ್ನ ಬಿಟ್ಟಿದ್ದು, ಅಮಾಯಕರ ಹತ್ಯೆಯಾಗಿದ್ದು, ರಿಡ್ಯೂ ಹೆಸರಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆದದ್ದು ಜನ ಅವರ ಸಾಧನೆಯನ್ನ ಪಿಸುಗುಡುತ್ತಿಲ್ಲ, ಕೂಗಿ-ಕೂಗಿ ಹೇಳ್ತಿದ್ದಾರೆ ಎಂದರು.
ಪ್ರಜಾಧ್ವನಿ ಅಂದರೆ ಪ್ರಜೆಗಳ ಧ್ವನಿಯನ್ನ ಕೇಳಬೇಕು, ಇವರು ಮೈಕ್ ಹಿಡಿದು ಕೂಗೋದಲ್ಲ ನಮ್ಮ ಪ್ರಶ್ನೆಗೆ ನೇರವಾಗಿ ಉತ್ತರಿಸುವ ಸ್ಥಿತಿಯಲ್ಲಿ ಕಾಂಗ್ರೆಸ್ಸಿಗರು ಇಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಧ್ವನಿ ಚುನಾವಣೆಯಲ್ಲಿ ಕೇಳುತ್ತದೆ ಎಂದು ಸಿ.ಟಿ.ರವಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು