3:14 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ 3ನೇ ಪಟ್ಟಿ: ನಿನ್ನೆ ಕೈ ಹಿಡಿದ ಸವದಿಗೆ ಇಂದು ಅಥಣಿ ಟಿಕೆಟ್!; ಮಂಗಳೂರು ದಕ್ಷಿಣದಿಂದ ಕೊನೆಗೂ ಜೆ.ಆರ್. ಲೋಬೊ, ಪುತ್ತೂರಿನಿಂದ ರೈಗೆ ಅವಕಾಶ

15/04/2023, 15:35

ನವದೆಹಲಿ(reporterkarnataka.com): ರಾಜ್ಯ ವಿಧಾನ ಸಭೆ ಚುನಾವಣೆಗೆ ಸಂಬಂಧಿಸಿದ್ದಂತೆ
ಕಾಂಗ್ರೆಸ್ ಪಕ್ಷದ 3ನೇ ಪಟ್ಟಿ ಬಿಡುಗಡೆಯಾಗಿದ್ದು, ಮಂಗಳೂರು ದಕ್ಷಿಣದಿಂದ ಜೆ. ಆರ್. ಲೋಬೊ ಹಾಗೂ ಪುತ್ತೂರು ಕ್ಷೇತ್ರದಿಂದ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ. ಮಂಗಳೂರು ಉತ್ತರಕ್ಕೆ ಇನ್ನೂ ನಿರ್ಧಾರವಾಗಿಲ್ಲ.
ಒಟ್ಟು 43 ಮಂದಿಯ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿದೆ. ನಿನ್ನೆ ಕಾಂಗ್ರೆಸ್ ಸೇರಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಅಥಣಿ ಕ್ಷೇತ್ರದಿಂದ ಇಂದು ನಿರಾಯಸವಾಗಿ ಟಿಕೆಟ್ ಲಭಿಸಿದೆ. ಹಾಗೆ ಪುತ್ತೂರು ಕ್ಷೇತ್ರದಿಂದ ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ಲಭಿಸಿದೆ. ಇಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹಾಗೂ ಅಶೋಕ್ ಕುಮಾರ್ ರೈ ಅವರ ನಡುವೆ ಟಿಕೆಟ್ ಗಾಗಿ ತೀವ್ರ ಪೈಪೋಟಿ ನಡೆದಿತ್ತು. ಕೋಲಾರದಿಂದ ಕೊತ್ತೂರು ಮಂಜುನಾಥಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಅಲ್ಲಿಂದ ಟಿಕೆಟ್ ದೊರೆತಿಲ್ಲ. ಚಿತ್ರನಟಿ ಉಮಾಶ್ರೀ ಅವರಿಗೆ
ತೆರೆದಾಳದಿಂದ ಈ ಬಾರಿ ಟಿಕೆಟ್ ಸಿಕ್ಕಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು