11:17 PM Wednesday15 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಾಂಗ್ರೆಸ್ ತಾಲಿಬಾನ್ ರೀತಿ ಆಡಳಿತ ನಡೆಸುತ್ತಿದೆ: ಮಂಗಳೂರಿನಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪ

12/06/2024, 16:24

ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಕೋಮು ಸೌಹಾರ್ದತೆ ಹಾಳು ಮಾಡುವ ಮೂಲಕ ತಾಲಿಬಾನಿ ರೀತಿಯಲ್ಲಿ ಸರಕಾರ ನಡೆಸುತ್ತಿದೆ. ತಾಲಿಬಾನ್ ಸರಕಾರವನ್ನು ನಾವು ಬಗ್ಗು ಬಡಿಯುತ್ತೇವೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಮಂಗಳೂರಿನ ಹೊರ ವಲಯದ ಬೋಳ್ಯಾರ್‌ನಲ್ಲಿ ನಡೆದ ಚೂರಿ ಇರಿತ ಪ್ರಕರಣದ ಕುರಿತು ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರು
ಭಾರತ್ ಮಾತಾ ಕೀ ಜೈ ಘೋಷಣೆ ಮಾತ್ರ ಕೂಗಿದ್ದಾರೆ.
ನಂತರ ಅವರನ್ನು ಅಟ್ಟಾಡಿಸಿ ಡ್ರ್ಯಾಗನ್ ನಿಂದ ಹೊಟ್ಟೆಗೆ ತುಚ್ಚಿದ್ದಾರೆ. ಅವರ ಕೈಯಲ್ಲಿ ಡ್ರ್ಯಾಗನ್‌ ಹೇಗೆ ಬಂತು, ಇದು ಪೂರ್ವ ನಿಯೋಜಿತ ಕೊಲೆ ಪ್ರಯತ್ನ ಎಂದು ಆರ್. ಅಶೋಕ್ ಆಪಾದಿಸಿದರು.


ವಿಧಾನಸಭೆಯಲ್ಲಿ ಪಾಕಿಸ್ತಾನಕ್ಕೆ ಜೈ ಅಂದವರಿಗೆ ಬೇಲ್ ಕೊಡಿಸಿದ್ದಾರೆ. ಕರ್ನಾಟಕವನ್ನು ತಾಲಿಬಾನ್ ಮಾಡಲು ಹೋಗಿದ್ದಾರೆ. ತಾಲಿಬಾನ್ ಸರ್ಕಾರವನ್ನು ನಾವು ಬಗ್ಗು ಬಡಿಯುತ್ತೇವೆ. ಇದನ್ನು ಇಲ್ಲಿಗೆ ಬಿಡುದಿಲ್ಲ, ವಿಧಾನಸಭೆಯಲ್ಲಿ ಸ್ಪೀಕರ್ ಮುಂದೆ ಹೋರಾಟ ಮಾಡುತ್ತೇವೆ. ಇದು ಸ್ಪೀಕರ್ ಕ್ಷೇತ್ರದಲ್ಲಿ ನಡೆದಿರುವುದು.
ಹಲ್ಲೆಗೆ ಒಳಗಾದ ಪರವಾಗಿ ನಿಲ್ಲಬೇಕು ಅದು ಮನುಷ್ಯತ್ವ.
ಅದೇ ಆಸ್ಪತ್ರೆಗೆ ಆರೋಗ್ಯ ಸಚಿವರು ಹೋಗಿದ್ದರು, ಗಾಯಗೊಂಡವರನ್ನು ವಿಚಾರಿಸಿಲ್ಲ. ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ಮತ್ತೆ ಕೇಸ್ ಹಾಕಿದ್ದಾರೆ.
ಘಟನೆ ಆಗಿ ಮರುದಿನ ಕೇಸ್ ಮಾಡಿದ್ದಾರೆ, ಅಷ್ಟೋತ್ತು ಮಣ್ಣು ತಿನ್ನುತಿದ್ರಾ..? ಎಂದು ಅವರು ಕಿಡಿ ಮಾರಿದರು.
ವಿಡಿಯೋದಲ್ಲಿ ಪ್ರಚೋದನೆಕಾರಿ ಹೇಳಿದ್ರೆ ಬಿಡುಗಡೆ ಮಾಡಿ. ಅಮಾಯಕ ಮೇಲೆ ಕೇಸ್ ಮಾಡಿ, ಮೈನ್ ಕೇಸ್ ವೀಕ್ ಮಾಡುತ್ತಿದ್ದಾರೆ.
ಕಾರ್ಯಕರ್ತರ ಮೇಲೆ ಹಾಕಿದ ಕೇಸ್ ವಾಪಾಸು ತೆಗೆದುಕೊಳ್ಳಬೇಕು. ಕಾನೂನಿಗೆ ಬೆಲೆ ಇಲ್ಲ, ಹಾಳಾಗಿ ವರ್ಷ ಆಗಿದೆ. ಜಿಲ್ಲೆಗೆ ಒಬ್ಬೊಬ್ಬ ಹೋಮ್ ಮಿನಿಸ್ಟರ್ ಆಗಿದ್ದಾರೆ.
ಕ್ರೈಂ ರೇಟ್ 40% ಜಾಸ್ತಿಯಾಗಿದೆ. ಗೂಂಡಾ ರಾಜ್ಯ ಆಗೋಕೆ ಎಲ್ಲರನ್ನು ಪ್ರಿಪೇರ್ ಮಾಡಿದ್ದಾರೆ ಎಂದು ಅವರು ನುಡಿದರು.
ಸರ್ಕಾರ ಬದುಕಿದೆಯಾ? ಸತ್ತಿದೆಯಾ ಗೊತ್ತಾಗುತ್ತಿಲ್ಲ.
ಕಾಂಗ್ರೆಸ್‌ನಲ್ಲಿ ಪುಡಿ ರೌಡಿಗಳಿಗೆ ಪರವಾನಿಗೆ ಕೊಟ್ಟಂತೆ ಆಗಿದೆ.
ನಿಮ್ಮ ಯೋಗ್ಯತೆಗೆ ಗ್ಯಾರಂಟಿ ಏನಾಯ್ತು?, ನಿಮ್ಮ ಶಾಸಕರೇ ಉಗಿಯುತ್ತಿದ್ದಾರೆ.
ನಾಳೆ ಸಭೆ ಸೇರಿ, ಇದಕ್ಕೆ ಯಾವ ಹೋರಾಟ ಮಾಡುತ್ತೇವೆ ಎನ್ನುವ ತೀರ್ಮಾನ ಮಾಡುತ್ತೇವೆ. ಕಾರ್ಯಕರ್ತರ ಪರವಾಗಿ ನಿಲ್ಲುತ್ತೇವೆ
ಜಿಲ್ಲಾಡಳಿತ ಚೂರಿ ಇರಿತಕ್ಕೆ ಒಳಗಾದವರ ವೆಚ್ಚ ಭರಿಸಬೇಕು‌ ಎಂದು ಅವರು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು