10:41 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಾಂಗ್ರೆಸ್ ತಾಲಿಬಾನ್ ರೀತಿ ಆಡಳಿತ ನಡೆಸುತ್ತಿದೆ: ಮಂಗಳೂರಿನಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪ

12/06/2024, 16:24

ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಕೋಮು ಸೌಹಾರ್ದತೆ ಹಾಳು ಮಾಡುವ ಮೂಲಕ ತಾಲಿಬಾನಿ ರೀತಿಯಲ್ಲಿ ಸರಕಾರ ನಡೆಸುತ್ತಿದೆ. ತಾಲಿಬಾನ್ ಸರಕಾರವನ್ನು ನಾವು ಬಗ್ಗು ಬಡಿಯುತ್ತೇವೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಮಂಗಳೂರಿನ ಹೊರ ವಲಯದ ಬೋಳ್ಯಾರ್‌ನಲ್ಲಿ ನಡೆದ ಚೂರಿ ಇರಿತ ಪ್ರಕರಣದ ಕುರಿತು ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರು
ಭಾರತ್ ಮಾತಾ ಕೀ ಜೈ ಘೋಷಣೆ ಮಾತ್ರ ಕೂಗಿದ್ದಾರೆ.
ನಂತರ ಅವರನ್ನು ಅಟ್ಟಾಡಿಸಿ ಡ್ರ್ಯಾಗನ್ ನಿಂದ ಹೊಟ್ಟೆಗೆ ತುಚ್ಚಿದ್ದಾರೆ. ಅವರ ಕೈಯಲ್ಲಿ ಡ್ರ್ಯಾಗನ್‌ ಹೇಗೆ ಬಂತು, ಇದು ಪೂರ್ವ ನಿಯೋಜಿತ ಕೊಲೆ ಪ್ರಯತ್ನ ಎಂದು ಆರ್. ಅಶೋಕ್ ಆಪಾದಿಸಿದರು.


ವಿಧಾನಸಭೆಯಲ್ಲಿ ಪಾಕಿಸ್ತಾನಕ್ಕೆ ಜೈ ಅಂದವರಿಗೆ ಬೇಲ್ ಕೊಡಿಸಿದ್ದಾರೆ. ಕರ್ನಾಟಕವನ್ನು ತಾಲಿಬಾನ್ ಮಾಡಲು ಹೋಗಿದ್ದಾರೆ. ತಾಲಿಬಾನ್ ಸರ್ಕಾರವನ್ನು ನಾವು ಬಗ್ಗು ಬಡಿಯುತ್ತೇವೆ. ಇದನ್ನು ಇಲ್ಲಿಗೆ ಬಿಡುದಿಲ್ಲ, ವಿಧಾನಸಭೆಯಲ್ಲಿ ಸ್ಪೀಕರ್ ಮುಂದೆ ಹೋರಾಟ ಮಾಡುತ್ತೇವೆ. ಇದು ಸ್ಪೀಕರ್ ಕ್ಷೇತ್ರದಲ್ಲಿ ನಡೆದಿರುವುದು.
ಹಲ್ಲೆಗೆ ಒಳಗಾದ ಪರವಾಗಿ ನಿಲ್ಲಬೇಕು ಅದು ಮನುಷ್ಯತ್ವ.
ಅದೇ ಆಸ್ಪತ್ರೆಗೆ ಆರೋಗ್ಯ ಸಚಿವರು ಹೋಗಿದ್ದರು, ಗಾಯಗೊಂಡವರನ್ನು ವಿಚಾರಿಸಿಲ್ಲ. ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ಮತ್ತೆ ಕೇಸ್ ಹಾಕಿದ್ದಾರೆ.
ಘಟನೆ ಆಗಿ ಮರುದಿನ ಕೇಸ್ ಮಾಡಿದ್ದಾರೆ, ಅಷ್ಟೋತ್ತು ಮಣ್ಣು ತಿನ್ನುತಿದ್ರಾ..? ಎಂದು ಅವರು ಕಿಡಿ ಮಾರಿದರು.
ವಿಡಿಯೋದಲ್ಲಿ ಪ್ರಚೋದನೆಕಾರಿ ಹೇಳಿದ್ರೆ ಬಿಡುಗಡೆ ಮಾಡಿ. ಅಮಾಯಕ ಮೇಲೆ ಕೇಸ್ ಮಾಡಿ, ಮೈನ್ ಕೇಸ್ ವೀಕ್ ಮಾಡುತ್ತಿದ್ದಾರೆ.
ಕಾರ್ಯಕರ್ತರ ಮೇಲೆ ಹಾಕಿದ ಕೇಸ್ ವಾಪಾಸು ತೆಗೆದುಕೊಳ್ಳಬೇಕು. ಕಾನೂನಿಗೆ ಬೆಲೆ ಇಲ್ಲ, ಹಾಳಾಗಿ ವರ್ಷ ಆಗಿದೆ. ಜಿಲ್ಲೆಗೆ ಒಬ್ಬೊಬ್ಬ ಹೋಮ್ ಮಿನಿಸ್ಟರ್ ಆಗಿದ್ದಾರೆ.
ಕ್ರೈಂ ರೇಟ್ 40% ಜಾಸ್ತಿಯಾಗಿದೆ. ಗೂಂಡಾ ರಾಜ್ಯ ಆಗೋಕೆ ಎಲ್ಲರನ್ನು ಪ್ರಿಪೇರ್ ಮಾಡಿದ್ದಾರೆ ಎಂದು ಅವರು ನುಡಿದರು.
ಸರ್ಕಾರ ಬದುಕಿದೆಯಾ? ಸತ್ತಿದೆಯಾ ಗೊತ್ತಾಗುತ್ತಿಲ್ಲ.
ಕಾಂಗ್ರೆಸ್‌ನಲ್ಲಿ ಪುಡಿ ರೌಡಿಗಳಿಗೆ ಪರವಾನಿಗೆ ಕೊಟ್ಟಂತೆ ಆಗಿದೆ.
ನಿಮ್ಮ ಯೋಗ್ಯತೆಗೆ ಗ್ಯಾರಂಟಿ ಏನಾಯ್ತು?, ನಿಮ್ಮ ಶಾಸಕರೇ ಉಗಿಯುತ್ತಿದ್ದಾರೆ.
ನಾಳೆ ಸಭೆ ಸೇರಿ, ಇದಕ್ಕೆ ಯಾವ ಹೋರಾಟ ಮಾಡುತ್ತೇವೆ ಎನ್ನುವ ತೀರ್ಮಾನ ಮಾಡುತ್ತೇವೆ. ಕಾರ್ಯಕರ್ತರ ಪರವಾಗಿ ನಿಲ್ಲುತ್ತೇವೆ
ಜಿಲ್ಲಾಡಳಿತ ಚೂರಿ ಇರಿತಕ್ಕೆ ಒಳಗಾದವರ ವೆಚ್ಚ ಭರಿಸಬೇಕು‌ ಎಂದು ಅವರು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು