1:08 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಾಂಗ್ರೆಸ್ ತಾಲಿಬಾನ್ ರೀತಿ ಆಡಳಿತ ನಡೆಸುತ್ತಿದೆ: ಮಂಗಳೂರಿನಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪ

12/06/2024, 16:24

ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಕೋಮು ಸೌಹಾರ್ದತೆ ಹಾಳು ಮಾಡುವ ಮೂಲಕ ತಾಲಿಬಾನಿ ರೀತಿಯಲ್ಲಿ ಸರಕಾರ ನಡೆಸುತ್ತಿದೆ. ತಾಲಿಬಾನ್ ಸರಕಾರವನ್ನು ನಾವು ಬಗ್ಗು ಬಡಿಯುತ್ತೇವೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಮಂಗಳೂರಿನ ಹೊರ ವಲಯದ ಬೋಳ್ಯಾರ್‌ನಲ್ಲಿ ನಡೆದ ಚೂರಿ ಇರಿತ ಪ್ರಕರಣದ ಕುರಿತು ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರು
ಭಾರತ್ ಮಾತಾ ಕೀ ಜೈ ಘೋಷಣೆ ಮಾತ್ರ ಕೂಗಿದ್ದಾರೆ.
ನಂತರ ಅವರನ್ನು ಅಟ್ಟಾಡಿಸಿ ಡ್ರ್ಯಾಗನ್ ನಿಂದ ಹೊಟ್ಟೆಗೆ ತುಚ್ಚಿದ್ದಾರೆ. ಅವರ ಕೈಯಲ್ಲಿ ಡ್ರ್ಯಾಗನ್‌ ಹೇಗೆ ಬಂತು, ಇದು ಪೂರ್ವ ನಿಯೋಜಿತ ಕೊಲೆ ಪ್ರಯತ್ನ ಎಂದು ಆರ್. ಅಶೋಕ್ ಆಪಾದಿಸಿದರು.


ವಿಧಾನಸಭೆಯಲ್ಲಿ ಪಾಕಿಸ್ತಾನಕ್ಕೆ ಜೈ ಅಂದವರಿಗೆ ಬೇಲ್ ಕೊಡಿಸಿದ್ದಾರೆ. ಕರ್ನಾಟಕವನ್ನು ತಾಲಿಬಾನ್ ಮಾಡಲು ಹೋಗಿದ್ದಾರೆ. ತಾಲಿಬಾನ್ ಸರ್ಕಾರವನ್ನು ನಾವು ಬಗ್ಗು ಬಡಿಯುತ್ತೇವೆ. ಇದನ್ನು ಇಲ್ಲಿಗೆ ಬಿಡುದಿಲ್ಲ, ವಿಧಾನಸಭೆಯಲ್ಲಿ ಸ್ಪೀಕರ್ ಮುಂದೆ ಹೋರಾಟ ಮಾಡುತ್ತೇವೆ. ಇದು ಸ್ಪೀಕರ್ ಕ್ಷೇತ್ರದಲ್ಲಿ ನಡೆದಿರುವುದು.
ಹಲ್ಲೆಗೆ ಒಳಗಾದ ಪರವಾಗಿ ನಿಲ್ಲಬೇಕು ಅದು ಮನುಷ್ಯತ್ವ.
ಅದೇ ಆಸ್ಪತ್ರೆಗೆ ಆರೋಗ್ಯ ಸಚಿವರು ಹೋಗಿದ್ದರು, ಗಾಯಗೊಂಡವರನ್ನು ವಿಚಾರಿಸಿಲ್ಲ. ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ಮತ್ತೆ ಕೇಸ್ ಹಾಕಿದ್ದಾರೆ.
ಘಟನೆ ಆಗಿ ಮರುದಿನ ಕೇಸ್ ಮಾಡಿದ್ದಾರೆ, ಅಷ್ಟೋತ್ತು ಮಣ್ಣು ತಿನ್ನುತಿದ್ರಾ..? ಎಂದು ಅವರು ಕಿಡಿ ಮಾರಿದರು.
ವಿಡಿಯೋದಲ್ಲಿ ಪ್ರಚೋದನೆಕಾರಿ ಹೇಳಿದ್ರೆ ಬಿಡುಗಡೆ ಮಾಡಿ. ಅಮಾಯಕ ಮೇಲೆ ಕೇಸ್ ಮಾಡಿ, ಮೈನ್ ಕೇಸ್ ವೀಕ್ ಮಾಡುತ್ತಿದ್ದಾರೆ.
ಕಾರ್ಯಕರ್ತರ ಮೇಲೆ ಹಾಕಿದ ಕೇಸ್ ವಾಪಾಸು ತೆಗೆದುಕೊಳ್ಳಬೇಕು. ಕಾನೂನಿಗೆ ಬೆಲೆ ಇಲ್ಲ, ಹಾಳಾಗಿ ವರ್ಷ ಆಗಿದೆ. ಜಿಲ್ಲೆಗೆ ಒಬ್ಬೊಬ್ಬ ಹೋಮ್ ಮಿನಿಸ್ಟರ್ ಆಗಿದ್ದಾರೆ.
ಕ್ರೈಂ ರೇಟ್ 40% ಜಾಸ್ತಿಯಾಗಿದೆ. ಗೂಂಡಾ ರಾಜ್ಯ ಆಗೋಕೆ ಎಲ್ಲರನ್ನು ಪ್ರಿಪೇರ್ ಮಾಡಿದ್ದಾರೆ ಎಂದು ಅವರು ನುಡಿದರು.
ಸರ್ಕಾರ ಬದುಕಿದೆಯಾ? ಸತ್ತಿದೆಯಾ ಗೊತ್ತಾಗುತ್ತಿಲ್ಲ.
ಕಾಂಗ್ರೆಸ್‌ನಲ್ಲಿ ಪುಡಿ ರೌಡಿಗಳಿಗೆ ಪರವಾನಿಗೆ ಕೊಟ್ಟಂತೆ ಆಗಿದೆ.
ನಿಮ್ಮ ಯೋಗ್ಯತೆಗೆ ಗ್ಯಾರಂಟಿ ಏನಾಯ್ತು?, ನಿಮ್ಮ ಶಾಸಕರೇ ಉಗಿಯುತ್ತಿದ್ದಾರೆ.
ನಾಳೆ ಸಭೆ ಸೇರಿ, ಇದಕ್ಕೆ ಯಾವ ಹೋರಾಟ ಮಾಡುತ್ತೇವೆ ಎನ್ನುವ ತೀರ್ಮಾನ ಮಾಡುತ್ತೇವೆ. ಕಾರ್ಯಕರ್ತರ ಪರವಾಗಿ ನಿಲ್ಲುತ್ತೇವೆ
ಜಿಲ್ಲಾಡಳಿತ ಚೂರಿ ಇರಿತಕ್ಕೆ ಒಳಗಾದವರ ವೆಚ್ಚ ಭರಿಸಬೇಕು‌ ಎಂದು ಅವರು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು