5:54 PM Wednesday2 - July 2025
ಬ್ರೇಕಿಂಗ್ ನ್ಯೂಸ್
Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಬೆಂಬಲಿಸಿದರೆ ಮತೀಯವಾದ ವಿಜ್ರಂಭಿಸುತ್ತವೆ: ಸಚಿವ ಸುನಿಲ್ ಕುಮಾರ್

24/04/2023, 21:29

ಕಾರ್ಕಳ(reporterkarnataka.com): ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ.
ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಬಿಸುತ್ತವೆ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸುನಿಲ್ ಕುಮಾರ್ ಹೇಳಿದರು.
ಕಡ್ತಲ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಮತೀಯವಾದಿಗಳ ಪರವಿದೆ. ಕಾಂಗ್ರೆಸ್ಸಿಗೆ ಹಾಕುವ ಒಂದೊಂದು ಮತವೂ ಅದು ಪಿ.ಎಫ್‌.ಐ ಸಂಘಟನೆ ಬಲಪಡಿಸಿದಂತೆ. ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿಗಳು ಸಮಾಜದಲ್ಲಿ ವಿಜ್ರಂಭಿಸಿ ಕೇಕೆ ಹಾಕುತ್ತವೆ, ಮತ್ತೊಂದು ಅಫ್ಘಾನಿಸ್ತಾನ ಆಗಲು ಬಿಡಬಾರದು ಎಂದರು. ಬಿಜೆಪಿ ಸರಕಾರ ಗೋಹತ್ಯೆ, ಲವ್ ಜಿಹಾದ್, ಮತಾಂತರ ನಿಷೇಧ ಕಾನೂನುಗಳನ್ನು ತಂದು ಹಿಂದೂಗಳ ರಕ್ಷಣೆಗೆ ಕಂಕಣ ಬದ್ಧವಾಗಿದೆ. ಕಾಂಗ್ರೆಸ್ ನೇತ್ರತ್ವದ ಸರಕಾರ ಅಧಿಕಾರಕ್ಕೆ ಬಂದರೆ ಗೋ ಹತ್ಯೆ ನಿಷೇಧ, ಮತಾಂತರ ಕಾನೂನು ವಾಪಸ್ ಪಡೆಯುವ ಭರವಸೆಯನ್ನು ಈಗಾಗಲೇ ಆ ಪಕ್ಷದ ಮುಖಂಡರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಇಂತಹವರಿಗೆ ಅಧಿಕಾರ ಸಿಕ್ಕರೆ ರಾಜ್ಯದ ಜನತೆಯ ಅದರಲ್ಲೂ ಹಿಂದೂಗಳ ಪರಿಸ್ಥಿತಿ ಯಾವ ರೀತಿ ಇರಬಹುದು ಎಂದು ನೀವೊಮ್ಮೆ ಊಹಿಸಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಬಾರದು, ಅದನ್ನು ತಡೆಯಲು ರಾಜ್ಯ ಮತ್ತು ಕಾರ್ಕಳ ವಿಧಾನ ಸಭಾ ಕ್ಷೇತ್ರ ಈ ಎರಡೂ ಕಡೆ ಬಿಜೆಪಿ ಶಾಸಕ ಇರಬೇಕು. ಕ್ಷೇತ್ರದ ಮತದಾರರು ಈ ಎಲ್ಲ ಅಂಶವನ್ನು ಮನದಲ್ಲಿ ಇಟ್ಟುಕೊಂಡು ಬಿಜೆಪಿಯನ್ನು ಗೆಲ್ಲಿಸಿಕೊಡಬೇಕು ಎಂದರು.
ಪ್ರಮುಖರಾದ ದಿನೇಶ್ ಪೈ, ಸಂಜೀವ ಪೂಜಾರಿ, ದಯಾನಂದ ಹೆಗ್ಡೆ ಮೊದಲಾದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು