2:18 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಬೆಂಬಲಿಸಿದರೆ ಮತೀಯವಾದ ವಿಜ್ರಂಭಿಸುತ್ತವೆ: ಸಚಿವ ಸುನಿಲ್ ಕುಮಾರ್

24/04/2023, 21:29

ಕಾರ್ಕಳ(reporterkarnataka.com): ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ.
ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಬಿಸುತ್ತವೆ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸುನಿಲ್ ಕುಮಾರ್ ಹೇಳಿದರು.
ಕಡ್ತಲ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಮತೀಯವಾದಿಗಳ ಪರವಿದೆ. ಕಾಂಗ್ರೆಸ್ಸಿಗೆ ಹಾಕುವ ಒಂದೊಂದು ಮತವೂ ಅದು ಪಿ.ಎಫ್‌.ಐ ಸಂಘಟನೆ ಬಲಪಡಿಸಿದಂತೆ. ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿಗಳು ಸಮಾಜದಲ್ಲಿ ವಿಜ್ರಂಭಿಸಿ ಕೇಕೆ ಹಾಕುತ್ತವೆ, ಮತ್ತೊಂದು ಅಫ್ಘಾನಿಸ್ತಾನ ಆಗಲು ಬಿಡಬಾರದು ಎಂದರು. ಬಿಜೆಪಿ ಸರಕಾರ ಗೋಹತ್ಯೆ, ಲವ್ ಜಿಹಾದ್, ಮತಾಂತರ ನಿಷೇಧ ಕಾನೂನುಗಳನ್ನು ತಂದು ಹಿಂದೂಗಳ ರಕ್ಷಣೆಗೆ ಕಂಕಣ ಬದ್ಧವಾಗಿದೆ. ಕಾಂಗ್ರೆಸ್ ನೇತ್ರತ್ವದ ಸರಕಾರ ಅಧಿಕಾರಕ್ಕೆ ಬಂದರೆ ಗೋ ಹತ್ಯೆ ನಿಷೇಧ, ಮತಾಂತರ ಕಾನೂನು ವಾಪಸ್ ಪಡೆಯುವ ಭರವಸೆಯನ್ನು ಈಗಾಗಲೇ ಆ ಪಕ್ಷದ ಮುಖಂಡರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಇಂತಹವರಿಗೆ ಅಧಿಕಾರ ಸಿಕ್ಕರೆ ರಾಜ್ಯದ ಜನತೆಯ ಅದರಲ್ಲೂ ಹಿಂದೂಗಳ ಪರಿಸ್ಥಿತಿ ಯಾವ ರೀತಿ ಇರಬಹುದು ಎಂದು ನೀವೊಮ್ಮೆ ಊಹಿಸಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಬಾರದು, ಅದನ್ನು ತಡೆಯಲು ರಾಜ್ಯ ಮತ್ತು ಕಾರ್ಕಳ ವಿಧಾನ ಸಭಾ ಕ್ಷೇತ್ರ ಈ ಎರಡೂ ಕಡೆ ಬಿಜೆಪಿ ಶಾಸಕ ಇರಬೇಕು. ಕ್ಷೇತ್ರದ ಮತದಾರರು ಈ ಎಲ್ಲ ಅಂಶವನ್ನು ಮನದಲ್ಲಿ ಇಟ್ಟುಕೊಂಡು ಬಿಜೆಪಿಯನ್ನು ಗೆಲ್ಲಿಸಿಕೊಡಬೇಕು ಎಂದರು.
ಪ್ರಮುಖರಾದ ದಿನೇಶ್ ಪೈ, ಸಂಜೀವ ಪೂಜಾರಿ, ದಯಾನಂದ ಹೆಗ್ಡೆ ಮೊದಲಾದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು