4:58 AM Saturday4 - April 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಬೆಂಬಲಿಸಿದರೆ ಮತೀಯವಾದ ವಿಜ್ರಂಭಿಸುತ್ತವೆ: ಸಚಿವ ಸುನಿಲ್ ಕುಮಾರ್

24/04/2023, 21:29

ಕಾರ್ಕಳ(reporterkarnataka.com): ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ.
ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಬಿಸುತ್ತವೆ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸುನಿಲ್ ಕುಮಾರ್ ಹೇಳಿದರು.
ಕಡ್ತಲ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಮತೀಯವಾದಿಗಳ ಪರವಿದೆ. ಕಾಂಗ್ರೆಸ್ಸಿಗೆ ಹಾಕುವ ಒಂದೊಂದು ಮತವೂ ಅದು ಪಿ.ಎಫ್‌.ಐ ಸಂಘಟನೆ ಬಲಪಡಿಸಿದಂತೆ. ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿಗಳು ಸಮಾಜದಲ್ಲಿ ವಿಜ್ರಂಭಿಸಿ ಕೇಕೆ ಹಾಕುತ್ತವೆ, ಮತ್ತೊಂದು ಅಫ್ಘಾನಿಸ್ತಾನ ಆಗಲು ಬಿಡಬಾರದು ಎಂದರು. ಬಿಜೆಪಿ ಸರಕಾರ ಗೋಹತ್ಯೆ, ಲವ್ ಜಿಹಾದ್, ಮತಾಂತರ ನಿಷೇಧ ಕಾನೂನುಗಳನ್ನು ತಂದು ಹಿಂದೂಗಳ ರಕ್ಷಣೆಗೆ ಕಂಕಣ ಬದ್ಧವಾಗಿದೆ. ಕಾಂಗ್ರೆಸ್ ನೇತ್ರತ್ವದ ಸರಕಾರ ಅಧಿಕಾರಕ್ಕೆ ಬಂದರೆ ಗೋ ಹತ್ಯೆ ನಿಷೇಧ, ಮತಾಂತರ ಕಾನೂನು ವಾಪಸ್ ಪಡೆಯುವ ಭರವಸೆಯನ್ನು ಈಗಾಗಲೇ ಆ ಪಕ್ಷದ ಮುಖಂಡರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಇಂತಹವರಿಗೆ ಅಧಿಕಾರ ಸಿಕ್ಕರೆ ರಾಜ್ಯದ ಜನತೆಯ ಅದರಲ್ಲೂ ಹಿಂದೂಗಳ ಪರಿಸ್ಥಿತಿ ಯಾವ ರೀತಿ ಇರಬಹುದು ಎಂದು ನೀವೊಮ್ಮೆ ಊಹಿಸಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಬಾರದು, ಅದನ್ನು ತಡೆಯಲು ರಾಜ್ಯ ಮತ್ತು ಕಾರ್ಕಳ ವಿಧಾನ ಸಭಾ ಕ್ಷೇತ್ರ ಈ ಎರಡೂ ಕಡೆ ಬಿಜೆಪಿ ಶಾಸಕ ಇರಬೇಕು. ಕ್ಷೇತ್ರದ ಮತದಾರರು ಈ ಎಲ್ಲ ಅಂಶವನ್ನು ಮನದಲ್ಲಿ ಇಟ್ಟುಕೊಂಡು ಬಿಜೆಪಿಯನ್ನು ಗೆಲ್ಲಿಸಿಕೊಡಬೇಕು ಎಂದರು.
ಪ್ರಮುಖರಾದ ದಿನೇಶ್ ಪೈ, ಸಂಜೀವ ಪೂಜಾರಿ, ದಯಾನಂದ ಹೆಗ್ಡೆ ಮೊದಲಾದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು