9:25 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಬೆಂಬಲಿಸಿದರೆ ಮತೀಯವಾದ ವಿಜ್ರಂಭಿಸುತ್ತವೆ: ಸಚಿವ ಸುನಿಲ್ ಕುಮಾರ್

24/04/2023, 21:29

ಕಾರ್ಕಳ(reporterkarnataka.com): ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ.
ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಬಿಸುತ್ತವೆ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸುನಿಲ್ ಕುಮಾರ್ ಹೇಳಿದರು.
ಕಡ್ತಲ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಮತೀಯವಾದಿಗಳ ಪರವಿದೆ. ಕಾಂಗ್ರೆಸ್ಸಿಗೆ ಹಾಕುವ ಒಂದೊಂದು ಮತವೂ ಅದು ಪಿ.ಎಫ್‌.ಐ ಸಂಘಟನೆ ಬಲಪಡಿಸಿದಂತೆ. ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿಗಳು ಸಮಾಜದಲ್ಲಿ ವಿಜ್ರಂಭಿಸಿ ಕೇಕೆ ಹಾಕುತ್ತವೆ, ಮತ್ತೊಂದು ಅಫ್ಘಾನಿಸ್ತಾನ ಆಗಲು ಬಿಡಬಾರದು ಎಂದರು. ಬಿಜೆಪಿ ಸರಕಾರ ಗೋಹತ್ಯೆ, ಲವ್ ಜಿಹಾದ್, ಮತಾಂತರ ನಿಷೇಧ ಕಾನೂನುಗಳನ್ನು ತಂದು ಹಿಂದೂಗಳ ರಕ್ಷಣೆಗೆ ಕಂಕಣ ಬದ್ಧವಾಗಿದೆ. ಕಾಂಗ್ರೆಸ್ ನೇತ್ರತ್ವದ ಸರಕಾರ ಅಧಿಕಾರಕ್ಕೆ ಬಂದರೆ ಗೋ ಹತ್ಯೆ ನಿಷೇಧ, ಮತಾಂತರ ಕಾನೂನು ವಾಪಸ್ ಪಡೆಯುವ ಭರವಸೆಯನ್ನು ಈಗಾಗಲೇ ಆ ಪಕ್ಷದ ಮುಖಂಡರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಇಂತಹವರಿಗೆ ಅಧಿಕಾರ ಸಿಕ್ಕರೆ ರಾಜ್ಯದ ಜನತೆಯ ಅದರಲ್ಲೂ ಹಿಂದೂಗಳ ಪರಿಸ್ಥಿತಿ ಯಾವ ರೀತಿ ಇರಬಹುದು ಎಂದು ನೀವೊಮ್ಮೆ ಊಹಿಸಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಬಾರದು, ಅದನ್ನು ತಡೆಯಲು ರಾಜ್ಯ ಮತ್ತು ಕಾರ್ಕಳ ವಿಧಾನ ಸಭಾ ಕ್ಷೇತ್ರ ಈ ಎರಡೂ ಕಡೆ ಬಿಜೆಪಿ ಶಾಸಕ ಇರಬೇಕು. ಕ್ಷೇತ್ರದ ಮತದಾರರು ಈ ಎಲ್ಲ ಅಂಶವನ್ನು ಮನದಲ್ಲಿ ಇಟ್ಟುಕೊಂಡು ಬಿಜೆಪಿಯನ್ನು ಗೆಲ್ಲಿಸಿಕೊಡಬೇಕು ಎಂದರು.
ಪ್ರಮುಖರಾದ ದಿನೇಶ್ ಪೈ, ಸಂಜೀವ ಪೂಜಾರಿ, ದಯಾನಂದ ಹೆಗ್ಡೆ ಮೊದಲಾದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು