5:33 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕಾಂಗ್ರೆಸ್ – ಬಿಜೆಪಿ ನಾಯಕರ ಒಳ ಗುದ್ದಾಟ ಅರಿಯಷ್ಟು ಜನರು ಮೂರ್ಖರಲ್ಲ: ಜನತಾದಳ ಮುಖಂಡ ಹಾಲಳ್ಳಿ

11/09/2021, 10:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

2023ರ ವಿಧಾನಸಭೆ ಚುನಾವಣೆ ಧೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷದ ಸಂಘಟನೆ ಮತ್ತು ಯುವ ಶಕ್ತಿ ಪಡೆ ನಿರ್ಮಾಣಕ್ಕಾಗಿ ತಳಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕಾರ್ಯ ತಾಲೂಕು ಜೆಡಿಎಸ್ ಪಕ್ಷದಿಂದ ಪ್ರಾರಂಭಿಸಲಾಗಿದೆ ಎಂದು ಪಕ್ಷದ ತಾಲೂಕು ಅಧ್ಯಕ್ಷ ಅಣ್ಣಾರಾಯ ಹಾಲಳ್ಳಿ ಹೇಳಿದರು.

ಅವರು ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ನಮ್ಮ ನಾಯಕರಾದ ಗಿರೀಶ ಬುಟಾಳಿಯವರ ನೇತೃತ್ವದಲ್ಲಿ ಮುಂಬರುವ ವಿಧಾನ ಪರಿಷತ್, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಸ್ಥಳೀಯ ಚುನಾವಣೆಗೆ ಅಭ್ಯರ್ಥಿಗಳನ್ನು ಗುರುತಿಸುವುದರ ಜತೆಗೆ ಯುವ ನಾಯಕರುಗಳಿಗೆ ಪಕ್ಷದ ಜವಾಬ್ದಾರಿ ನೀಡಲಾಗುವುದು. ಚುನಾವಣಾ ಸಮಯದಲ್ಲಿ ಪಕ್ಷಕ್ಕೆ ಬರುವವರಿಗೆ ಮಣೆ ಹಾಕದಿರಲು ನಿರ್ಧರಿಸಲಾಗಿದೆ. ಅಲ್ಲದೇ ಇನ್ನು ಮುಂದೆ ಸಮಾಜ ಸೇವೆಗಾಗಿ ರಾಜಕೀಯಕ್ಕೆ ಬರುವ ಮತ್ತು ನಿಸ್ವಾರ್ಥ ಮನೋಭಾವದಿಂದ ಪಕ್ಷದ ಕಾರ್ಯ ಮಾಡುವವರಿಗೆ ಆದ್ಯತೆ ನೀಡಲಾಗುವುದು.

ತಾಲೂಕಿನ ಜನ ಎರಡು ರಾಷ್ಟ್ರೀಯ ಪಕ್ಷಗಳ ವೈಫಲ್ಯ ನೀತಿಗಳಿಗೆ ಬೇಸತ್ತಿರುವವರು. ಜನರು ನಮ್ಮ ಪಕ್ಷದತ್ತ  ಆಶಾ ಭಾವನೆ ತಾಳಿದ್ದಾರೆ ಮುಂಬರುವ ದಿನಗಳಲ್ಲಿ ಜನರ ಆಶೋತ್ತರಗಳನ್ನು ಈಡೇರಿಸುವ ಭರವಸೆ ನಮ್ಮ ಕರ್ತವ್ಯವಾಗಿದೆ,ಆ ನಿಟ್ಟಿನಲ್ಲಿ ಜೆಡಿಎಸ್ ಪಕ್ಷದ  ಕಾರ್ಯಕ್ರಮ ಹಾಕಿಕೊಳ್ಳಲಾಗುವುದು. ನಮ್ಮದು ಪ್ರಾದೇಶಿಕ ಪಕ್ಷವಾಗಿರುವದರಿಂದ ನಾವು ಮಾತ್ರ ಅವರುಗಳ ಆಶೆಯಗಳಿಗೆ ದ್ವನಿಯಾಗಲಿದ್ದೆವೆ ಎಂಬ ಜನರ ಅಭಿಪ್ರಾಯ ಎಲ್ಲ ಕಡೆ ಕೇಳಿ ಬರುತ್ತಿದೆ ಇದಕ್ಕೆ ಪೂರಕವಾಗಿ ನಾವು ಕಾರ್ಯ ಮಾಡಲಿದ್ದೇವೆ.

ತಾಲೂಕಿನ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿನ ನಾಯಕರುಗಳ ಮಧ್ಯದಲ್ಲಿ ನಡೆದಿರುವ ರಾಜಕೀಯ ಒಳ ಗುದ್ದಾಟ ಅರಿಯದಷ್ಟು ಮೂರ್ಖರೇನು ಅಥಣಿ ಜನತೆ ಅಲ್ಲ. ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. 

ಅಥಣಿ ಅಭಿವೃದ್ಧಿಗಾಗಿ ಚಿಂತಿಸದವರು ಬರಿ ಟಿಕೇಟ್ ಚಿಂತನೆಯಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 

ಈ ವೇಳೆ ಶಿವಾನಂದ ಐಗಳಿ, ಅಪ್ಪಾಸಾಬ ನಾಯಕ, ರವಿ ಹಂಜಿ, ಶಿದರಾಯ ಬಿರಾದರ, ಜಕ್ಕಪ್ಪಾ ಧರಿಗೌಡರ,ದೀಪಕ ಲೋಣಾರೆ,ಬಸು ಹೊಳಿಕಟ್ಟಿ, ಅಜೀತ ಕಾಂಬಳೆ ಸೇರಿದಂತೆ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು