2:30 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕೇವಲ ಘೋಷಣೆಗಳಿಗಷ್ಟೇ ಸೀಮಿತವಾದ ಕಾಂಗ್ರೆಸ್ ಬಜೆಟ್: ವಿಧಾನಸಭೆಯಲ್ಲಿ ವೇದವ್ಯಾಸ ಕಾಮತ್ ಆಕ್ರೋಶ

20/03/2025, 22:04

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಕಳೆದ ಎರಡು ವರ್ಷಗಳ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳ ಪಾಲಿಗೆ ಅಭಿವೃದ್ಧಿಯ ಘೋಷಣೆಯನ್ನೂ ಮಾಡಿಲ್ಲ, ಮಾಡಿದ ಅಲ್ಪಸ್ವಲ್ಪ ಘೋಷಣೆಯನ್ನು ಅನುಷ್ಠಾನಕ್ಕೆ ತಂದಿಲ್ಲವೆಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದ ಪಾಲಿಗೆ ಬಜೆಟ್ ಎಂಬುದು ಕೇವಲ ಹಾಳೆಗಳ ಮೇಲಿನ ಅಕ್ಷರಗಳು ಅಷ್ಟೇ ಆದರೆ ಮುಖ್ಯಮಂತ್ರಿಗಳು ಗಂಟೆಗಟ್ಟಲೆ ನಿಂತು ಬಜೆಟ್ ಭಾಷಣ ಮಾಡುವುದು ಯಾಕೆ? ನಾವೆಲ್ಲ ಅದನ್ನು ಕೇಳಿಸಿಕೊಳ್ಳುವುದು ಯಾಕೆ? ಈ ಅಧಿವೇಶನ ಯಾಕೆ? ನನ್ನ ಬಳಿ 2023-24 ಹಾಗೂ 2024-25 ಸಾಲಿನ ಬಜೆಟ್ ನಲ್ಲಿ ಇದೇ ಸರ್ಕಾರ ಮೀನುಗಾರಿಕೆಗೆ, ಪ್ರವಾಸೋದ್ಯಮಕ್ಕೆ, ವಾಣಿಜ್ಯ ಕ್ಷೇತ್ರಕ್ಕೆ ಸೇರಿದಂತೆ ಕೆಲವೇ ಕೆಲವು ಅಭಿವೃದ್ಧಿ ಕಾರ್ಯಗಳಿಗೆ ಬಜೆಟ್ ನಲ್ಲೇ ಘೋಷಿಸಿರುವ ಪಟ್ಟಿ ಇವೆ. ಅವುಗಳಲ್ಲಿ ಯಾವುದನ್ನು ಸರ್ಕಾರ ಸಮರ್ಥವಾಗಿ ಅನುಷ್ಠಾನಗೊಳಿಸಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸರ್ಕಾರಕ್ಕೆ ಸವಾಲೆಸೆದರು.
ಸದ್ಯ ಕರಾವಳಿ ಜಿಲ್ಲೆಗಳ ಜನತೆ ಕೇವಲ ಘೋಷಣೆಗಳನ್ನು ಕೇಳಿಸಿಕೊಂಡು ಕುಣಿದು ಕುಪ್ಪಳಿಸಬೇಕಷ್ಟೇ ಎಂಬಂತಹ ವಾತಾವರಣ ನಿರ್ಮಾಣವಾಗಿರುವುದು ದುರಂತವಾಗಿದ್ದು, ಕರಾವಳಿಯ ಸಮಗ್ರ ಅಭಿವೃದ್ಧಿಯ ವಿಚಾರದಲ್ಲಿ ಶೂನ್ಯ ಸಂಪಾದನೆಯೇ ಈ ಸರ್ಕಾರದ ದೊಡ್ಡ ಸಾಧನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು