10:18 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕೇವಲ ಘೋಷಣೆಗಳಿಗಷ್ಟೇ ಸೀಮಿತವಾದ ಕಾಂಗ್ರೆಸ್ ಬಜೆಟ್: ವಿಧಾನಸಭೆಯಲ್ಲಿ ವೇದವ್ಯಾಸ ಕಾಮತ್ ಆಕ್ರೋಶ

20/03/2025, 22:04

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಕಳೆದ ಎರಡು ವರ್ಷಗಳ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳ ಪಾಲಿಗೆ ಅಭಿವೃದ್ಧಿಯ ಘೋಷಣೆಯನ್ನೂ ಮಾಡಿಲ್ಲ, ಮಾಡಿದ ಅಲ್ಪಸ್ವಲ್ಪ ಘೋಷಣೆಯನ್ನು ಅನುಷ್ಠಾನಕ್ಕೆ ತಂದಿಲ್ಲವೆಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದ ಪಾಲಿಗೆ ಬಜೆಟ್ ಎಂಬುದು ಕೇವಲ ಹಾಳೆಗಳ ಮೇಲಿನ ಅಕ್ಷರಗಳು ಅಷ್ಟೇ ಆದರೆ ಮುಖ್ಯಮಂತ್ರಿಗಳು ಗಂಟೆಗಟ್ಟಲೆ ನಿಂತು ಬಜೆಟ್ ಭಾಷಣ ಮಾಡುವುದು ಯಾಕೆ? ನಾವೆಲ್ಲ ಅದನ್ನು ಕೇಳಿಸಿಕೊಳ್ಳುವುದು ಯಾಕೆ? ಈ ಅಧಿವೇಶನ ಯಾಕೆ? ನನ್ನ ಬಳಿ 2023-24 ಹಾಗೂ 2024-25 ಸಾಲಿನ ಬಜೆಟ್ ನಲ್ಲಿ ಇದೇ ಸರ್ಕಾರ ಮೀನುಗಾರಿಕೆಗೆ, ಪ್ರವಾಸೋದ್ಯಮಕ್ಕೆ, ವಾಣಿಜ್ಯ ಕ್ಷೇತ್ರಕ್ಕೆ ಸೇರಿದಂತೆ ಕೆಲವೇ ಕೆಲವು ಅಭಿವೃದ್ಧಿ ಕಾರ್ಯಗಳಿಗೆ ಬಜೆಟ್ ನಲ್ಲೇ ಘೋಷಿಸಿರುವ ಪಟ್ಟಿ ಇವೆ. ಅವುಗಳಲ್ಲಿ ಯಾವುದನ್ನು ಸರ್ಕಾರ ಸಮರ್ಥವಾಗಿ ಅನುಷ್ಠಾನಗೊಳಿಸಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸರ್ಕಾರಕ್ಕೆ ಸವಾಲೆಸೆದರು.
ಸದ್ಯ ಕರಾವಳಿ ಜಿಲ್ಲೆಗಳ ಜನತೆ ಕೇವಲ ಘೋಷಣೆಗಳನ್ನು ಕೇಳಿಸಿಕೊಂಡು ಕುಣಿದು ಕುಪ್ಪಳಿಸಬೇಕಷ್ಟೇ ಎಂಬಂತಹ ವಾತಾವರಣ ನಿರ್ಮಾಣವಾಗಿರುವುದು ದುರಂತವಾಗಿದ್ದು, ಕರಾವಳಿಯ ಸಮಗ್ರ ಅಭಿವೃದ್ಧಿಯ ವಿಚಾರದಲ್ಲಿ ಶೂನ್ಯ ಸಂಪಾದನೆಯೇ ಈ ಸರ್ಕಾರದ ದೊಡ್ಡ ಸಾಧನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು