1:43 AM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ 4 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಹೆಸರು ಪ್ರಕಟ: ದಿನೇಶ್ ಅಮೀನ್ ಮಟ್ಟು, ಆರತಿಕೃಷ್ಣ, ಡಿ.ಜಿ. ಸಾಗರ್, ರಮೇಶ್ ಬಾಬುಗೆ ಅವಕಾಶ

06/06/2025, 21:25

ಬೆಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ನಲ್ಲಿ ತೆರವಾಗಿರುವ 4 ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಎನ್ ಆರ್ ಐ ಮಾಜಿ ಉಪಾಧ್ಯಕ್ಷೆ ಆರತಿಕೃಷ್ಣ, ದಲಿತ ಸಂಘರ್ಷ ಸಮಿತಿಯ ಡಿ.ಜಿ. ಸಾಗರ್ ಹಾಗೂ ಮಾಜಿ ಎಂಎಲ್ ಸಿ ರಮೇಶ್ ಬಾಬು ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ದಿನೇಶ್ ಅಮೀನ್ ಮಟ್ಟು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭ್ಯರ್ಥಿಯಾದರೆ, ಆರತಿಕೃಷ್ಣ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಭ್ಯರ್ಥಿ. ಉಳಿದ ಡಿ.ಜಿ. ಸಾಗರ್ ಹಾಗೂ ರಮೇಶ್ ಬಾಬು ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಭ್ಯರ್ಥಿಯಾಗಿದ್ದಾರೆ. ತೆರವಾಗಿರುವ 4 ಎಂಎಲ್ ಸಿ ಸ್ಥಾನಕ್ಕಾಗಿ ಕಾಂಗ್ರೆಸ್ ನೊಳಗೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಸುಮಾರು ಎರಡು ಡಜನಿಗೂ ಅಧಿಕ ಅಕಾಂಕ್ಷಿಗಳು ಈ ಸ್ಥಾನಕ್ಕಾಗಿ ಟೆವಲ್ ಹಾಸಿದ್ದರು.
ಕಾಂಗ್ರೆಸ್ ನ ಹಿರಿಯ ನಾಯಕರಾದ ಬಿ.ಎಲ್. ಶಂಕರ್, ವಿ. ಸುದರ್ಶನ್ ಅವರ ಹೆಸರು ಕೂಡ ಕೇಳಿ ಬರುತ್ತಿತ್ರು. ಆದರೆ, ಅಂತಿಮವಾಗಿ ಈ ನಾಲ್ವರನ್ನು ಆಯ್ಕೆ ಮಾಡಲಾಗಿದೆ. ದಿನೇಶ್ ಅಮೀನ್ ಮಟ್ಟು ಅವರು ಪ್ರಜಾವಾಣಿ ಪತ್ರಿಕೆಯಲ್ಲಿ ದುಡಿದು ಸಾಕಷ್ಟು ಹೆಸರು ಪಡೆದವರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿಯೂ ಕಾರ್ಯನಿರ್ವಹಿಸಿದ್ದರು. ಮಾಜಿ ಸಚಿವರ ಪುತ್ರಿಯಾದ ಆರತಿಕೃಷ್ಣ ಅವರು ಎನ್ ಆರ್ ಐಯಲ್ಲಿ ಸಾಕಷ್ಟು ಕೆಲಸ ಮಾಡಿದವರು. ಡಿ.ಜಿ. ಸಾಗರ್ ಅವರು ದಸಂಸದಲ್ಲಿ ಕೆಲಸ ಮಾಡಿದವರು. ಹಾಗೆ ರಮೇಶ್ ಬಾಬು ಅವರು ಮಾಜಿ ಎಂಎಲ್ ಸಿಯಾಗಿ ಅನುಭವ ಹೊಂದಿದವರು.

ಇತ್ತೀಚಿನ ಸುದ್ದಿ

ಜಾಹೀರಾತು