1:39 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ 4 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಹೆಸರು ಪ್ರಕಟ: ದಿನೇಶ್ ಅಮೀನ್ ಮಟ್ಟು, ಆರತಿಕೃಷ್ಣ, ಡಿ.ಜಿ. ಸಾಗರ್, ರಮೇಶ್ ಬಾಬುಗೆ ಅವಕಾಶ

06/06/2025, 21:25

ಬೆಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ನಲ್ಲಿ ತೆರವಾಗಿರುವ 4 ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಎನ್ ಆರ್ ಐ ಮಾಜಿ ಉಪಾಧ್ಯಕ್ಷೆ ಆರತಿಕೃಷ್ಣ, ದಲಿತ ಸಂಘರ್ಷ ಸಮಿತಿಯ ಡಿ.ಜಿ. ಸಾಗರ್ ಹಾಗೂ ಮಾಜಿ ಎಂಎಲ್ ಸಿ ರಮೇಶ್ ಬಾಬು ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ದಿನೇಶ್ ಅಮೀನ್ ಮಟ್ಟು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭ್ಯರ್ಥಿಯಾದರೆ, ಆರತಿಕೃಷ್ಣ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಭ್ಯರ್ಥಿ. ಉಳಿದ ಡಿ.ಜಿ. ಸಾಗರ್ ಹಾಗೂ ರಮೇಶ್ ಬಾಬು ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಭ್ಯರ್ಥಿಯಾಗಿದ್ದಾರೆ. ತೆರವಾಗಿರುವ 4 ಎಂಎಲ್ ಸಿ ಸ್ಥಾನಕ್ಕಾಗಿ ಕಾಂಗ್ರೆಸ್ ನೊಳಗೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಸುಮಾರು ಎರಡು ಡಜನಿಗೂ ಅಧಿಕ ಅಕಾಂಕ್ಷಿಗಳು ಈ ಸ್ಥಾನಕ್ಕಾಗಿ ಟೆವಲ್ ಹಾಸಿದ್ದರು.
ಕಾಂಗ್ರೆಸ್ ನ ಹಿರಿಯ ನಾಯಕರಾದ ಬಿ.ಎಲ್. ಶಂಕರ್, ವಿ. ಸುದರ್ಶನ್ ಅವರ ಹೆಸರು ಕೂಡ ಕೇಳಿ ಬರುತ್ತಿತ್ರು. ಆದರೆ, ಅಂತಿಮವಾಗಿ ಈ ನಾಲ್ವರನ್ನು ಆಯ್ಕೆ ಮಾಡಲಾಗಿದೆ. ದಿನೇಶ್ ಅಮೀನ್ ಮಟ್ಟು ಅವರು ಪ್ರಜಾವಾಣಿ ಪತ್ರಿಕೆಯಲ್ಲಿ ದುಡಿದು ಸಾಕಷ್ಟು ಹೆಸರು ಪಡೆದವರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿಯೂ ಕಾರ್ಯನಿರ್ವಹಿಸಿದ್ದರು. ಮಾಜಿ ಸಚಿವರ ಪುತ್ರಿಯಾದ ಆರತಿಕೃಷ್ಣ ಅವರು ಎನ್ ಆರ್ ಐಯಲ್ಲಿ ಸಾಕಷ್ಟು ಕೆಲಸ ಮಾಡಿದವರು. ಡಿ.ಜಿ. ಸಾಗರ್ ಅವರು ದಸಂಸದಲ್ಲಿ ಕೆಲಸ ಮಾಡಿದವರು. ಹಾಗೆ ರಮೇಶ್ ಬಾಬು ಅವರು ಮಾಜಿ ಎಂಎಲ್ ಸಿಯಾಗಿ ಅನುಭವ ಹೊಂದಿದವರು.

ಇತ್ತೀಚಿನ ಸುದ್ದಿ

ಜಾಹೀರಾತು