11:42 AM Sunday19 - April 2026
ಬ್ರೇಕಿಂಗ್ ನ್ಯೂಸ್
ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ…

ಇತ್ತೀಚಿನ ಸುದ್ದಿ

ಮೋದಿ ಭಾಷಣದಲ್ಲಿ ಕಾಂಗ್ರೆಸ್ ಜಪವೇ 59 ಬಾರಿ, ಮಹಿಳೆಯರ ಪ್ರಸ್ತಾಪ ನಗಣ್ಯ’: ಮಸೂದೆ ಪತನದ ಬಳಿಕ ಖರ್ಗೆ ಲೇವಡಿ

19/04/2026, 11:30

ನವದೆಹಲಿ(reporterkarnataka.com): ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆಯಲ್ಲಿ ಸೋಲನುಭವಿಸಿದ ಬೆನ್ನಲ್ಲೇ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಟೀಕಿಸಿದ್ದಾರೆ. ಪ್ರಧಾನಿಯವರ 75 ನಿಮಿಷಗಳ ಭಾಷಣದಲ್ಲಿ ಮಹಿಳೆಯರ ಹಿತಾಸಕ್ತಿಗಿಂತ ಕಾಂಗ್ರೆಸ್ ಪಕ್ಷವನ್ನು ದೂಷಿಸುವುದಕ್ಕೇ ಹೆಚ್ಚಿನ ಆದ್ಯತೆ ನೀಡಲಾಗಿತ್ತು ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.
ಪ್ರಧಾನಿ ಭಾಷಣವನ್ನು ವಿಶ್ಲೇಷಿಸಿದ ಖರ್ಗೆ, “ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಬರೋಬ್ಬರಿ 59 ಬಾರಿ ‘ಕಾಂಗ್ರೆಸ್’ ಹೆಸರನ್ನು ಎತ್ತಿದ್ದಾರೆ. ಆದರೆ ಯಾವ ಮಹಿಳೆಯರಿಗಾಗಿ ಈ ಮಸೂದೆ ಎಂದು ಹೇಳುತ್ತಿದ್ದಾರೋ, ಆ ಮಹಿಳೆಯರ ಬಗ್ಗೆ ಅವರು ಮಾತನಾಡಿದ್ದು ಬಹಳ ಕಡಿಮೆ. ಇದು ಅವರ ರಾಜಕೀಯ ದ್ವೇಷವನ್ನು ತೋರಿಸುತ್ತದೆ,” ಎಂದು ಲೇವಡಿ ಮಾಡಿದ್ದಾರೆ.
ಲೋಕಸಭೆಯಲ್ಲಿ ಮಸೂದೆ ಸೋತಿದ್ದಕ್ಕೆ ವಿರೋಧ ಪಕ್ಷಗಳನ್ನು ಹೊಣೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿದ ಖರ್ಗೆ, “ಮಸೂದೆ ಸೋತಿದ್ದು ಸರ್ಕಾರದ ವೈಫಲ್ಯದಿಂದ. ಆದರೆ ಪ್ರಧಾನಿಯವರು ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವ ಮೂಲಕ ತಮ್ಮ ತಪ್ಪುಗಳನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ,” ಎಂದು ಆರೋಪಿಸಿದ್ದಾರೆ.
ಪ್ರಧಾನಿ ಮೋದಿಯವರು ವಿಪಕ್ಷಗಳನ್ನು ‘ಮಹಿಳಾ ವಿರೋಧಿ’ ಎಂದು ಕರೆದಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, “ನಾವು ಮಹಿಳೆಯರಿಗೆ ತಕ್ಷಣದ ಮೀಸಲಾತಿ ಕೇಳುತ್ತಿದ್ದೇವೆ, ಬಿಜೆಪಿ ಅದನ್ನು 2029 ಅಥವಾ 2034ಕ್ಕೆ ತಳ್ಳುತ್ತಿದೆ. ನಿಜವಾದ ಮಹಿಳಾ ವಿರೋಧಿಗಳು ಯಾರು ಎಂಬುದು ದೇಶಕ್ಕೆ ತಿಳಿದಿದೆ,” ಎಂದು ತಿರುಗೇಟು ನೀಡಿದ್ದಾರೆ.
ಇದು ದೇಶವನ್ನುದ್ದೇಶಿಸಿ ಮಾಡಿದ ಭಾಷಣವಾಗಿರಲಿಲ್ಲ, ಬದಲಿಗೆ ಮುಂಬರುವ ವಿಧಾನಸಭಾ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಡಿದ ಕೇವಲ ‘ಜಾಹೀರಾತು’ ಎಂದು ಖರ್ಗೆ ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು