5:16 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಕಾಂಗ್ರೆಸ್‌-ಕಮ್ಯುನಿಸ್ಟ್‌ ಬರೀ ಭ್ರಷ್ಟಾಚಾರದ ಆಡಳಿತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

24/03/2025, 21:17

* ʼಸೂರ್ಯ ಘರ್‌ʼ ಅನುಷ್ಠಾನಗೊಳಿಸದ ಕೇರಳ ಸರ್ಕಾರ: ಗಂಭೀರ ಆರೋಪ

ತಿರುವನಂತಪುರ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಅಭಿವೃದ್ಧಿ ಪಥದಲ್ಲಿ ಹೆಜ್ಜೆ ಹಾಕುತ್ತಿದ್ದರೆ, ಕಾಂಗ್ರೆಸ್‌-ಕಮ್ಯುನಿಸ್ಟ್‌ ಆಡಳಿತದ ಸರ್ಕಾರಗಳು ಬರೀ ಭ್ರಷ್ಟಾಚಾರ, ಹಿಂಸಾಚಾರದಲ್ಲಿ ಮುಳುಗಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು.

ತಿರುವನಂತಪುರದಲ್ಲಿ ಇಂದು ಬಿಜೆಪಿ ನೂತನ ಅಧ್ಯಕ್ಷರ ಘೋಷಣೆ ಸಮಾರಂಭ ಉದ್ದೇಶಿಸಿ ಮಾತನಾಡಿ, ಕೇರಳ ಸರ್ಕಾರವಂತೂ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದೆ. ಕೇಂದ್ರ ಸರ್ಕಾರ ಅಭಿವೃದ್ಧಿಗಾಗಿ ಅದೆಷ್ಟೇ ಹಣ ನೀಡಿದರೂ ಅಭಿವೃದ್ಧಿಗೆ ಬಳಸದೆ ಭ್ರಷ್ಟಾಚಾರ ನಡೆಸುತ್ತಿದೆ ಎಂದು ದೂರಿದರು.
*ಜನಕ್ಕೆ ಸೂರ್ಯ ಘರ್‌ ಕಲ್ಪಿಸದ ಸರ್ಕಾರ:* ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಸೂರ್ಯ ಘರ್‌, ಕುಸುಮ್‌ ಬಿ ಅಂತಹ ಅತ್ಯುತ್ತಮ ಇಂಧನ ಸ್ವಾವಲಂಬಿ ಯೋಜನೆಗಳನ್ನು ಕೊಟ್ಟರೆ ಕೇರಳದಂತಹ ಬಿಜೆಪಿಯೇತರ ರಾಜ್ಯಗಳು ಸಂಪೂರ್ಣವಾಗಿ ಉಪೇಕ್ಷಿಸಿವೆ. ಜನಕ್ಕೆ ತಲುಪಿಸುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದರು.
ಕೇಂದ್ರ ಸರ್ಕಾರ ದೇಶಾದ್ಯಂತ 10 ಲಕ್ಷಕ್ಕೂ ಅಧಿಕ ಸೂರ್ಯ ಘರ್‌ ಘಟಕ ಅಳವಡಿಸಿ ಜನರಿಗೆ ಉಚಿತ ವಿದ್ಯುತ್‌ ಕಲ್ಪಿಸುವಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದರೆ, ಕೇರಳ ಸರ್ಕಾರ ಕನಿಷ್ಠ 1000 ಫಲಾನುಭವಿಗಳಿಗೂ ಸೂರ್ಯ ಘರ್‌ ಯೋಜನೆ ಕಲ್ಪಿಸಿಲ್ಲ ಎಂದು ತೀವ್ರ ಅಸಮಾಧಾನ ಹೊರ ಹಾಕಿದರು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ.
ಭಾರತದಲ್ಲಿ ಕೇರಳ ಅತಿ ಹೆಚ್ಚು ಬಿಸಿಲಿನ ದಿನಗಳಲ್ಲಿರುವ ರಾಜ್ಯವಾಗಿದೆ. ಹಾಗಿದ್ದರೂ ಇಲ್ಲಿ ಸೂರ್ಯ ಘರ್‌ ಮತ್ತು ಕುಸುಮ್‌ ಬಿ ಯೋಜನೆ ಪರಿಣಾಮಕಾರಿ ಅನುಷ್ಠಾನವಾಗಿಲ್ಲ, ಈ ಮೂಲಕ ಸ್ಥಳೀಯ ಸರ್ಕಾರ ಕೇರಳದ ಜನರನ್ನು ವಂಚಿಸಿದೆ ಎಂದು ಆರೋಪಿಸಿದರು.
*ಸೂರ್ಯ ಘರ್‌ ಆದಾಯದ ಮೂಲ:*
ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳಿಸಿದ ಸೂರ್ಯ ಘರ್‌ ಯೋಜನೆ ಜನ ಸಾಮಾನ್ಯರಿಗೆ ಒಂದು ಆದಾಯದ ಮೂಲವೂ ಆಗಿದೆ. ಸೂರ್ಯ ಘರ್‌ ಅಳವಡಿಕೆಯಿಂದ 300ಕ್ಕೂ ಹೆಚ್ಚು ಯೂನಿಟ್‌ ಉಚಿತ ವಿದ್ಯುತ್‌ ಬಳಕೆ ಮಾತ್ರವಲ್ಲದೆ, ಹೆಚ್ಚಿನ ವಿದ್ಯುತ್‌ ಉತ್ಪಾದಿಸಿ ಮಾರಾಟ ವ್ಯವಸ್ಥೆಯೂ ಇದರಲ್ಲಿದೆ. ಈ ಯೋಜನೆ ಮುಖೇನ 25 ವರ್ಷಗಳಲ್ಲಿ ₹15 ಲಕ್ಷ ಆದಾಯ ಕಂಡುಕೊಳ್ಳಲು ಸಾಧ್ಯವಿದೆ ಮತ್ತು 40 ವರ್ಷಗಳವರೆಗೆ ಉಚಿತ ಸೌರ ವಿದ್ಯುತ್ ಪಡೆಯಬಹುದಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.
*ಬಿಜೆಪಿ ನಿಷ್ಠೆ ಭಾರತಕ್ಕೆ; ಕಾಂಗ್ರೆಸ್‌ ನಿಷ್ಠೆ ಬೇರೆ ದೇಶಕ್ಕೆ:* ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ಪ್ರತಿನಿತ್ಯ ಪ್ರತಿಯೊಬ್ಬರ ಅಭಿವೃದ್ಧಿ, ವಿಕಾಸಕ್ಕೆ ಶ್ರಮಿಸುತ್ತಿದೆ. ಅದರಂತೆ ಕೇರಳದ ಜನರ ಅಭಿವೃದ್ಧಿಗೂ ಬದ್ಧವಾಗಿದೆ ಎಂದ ಸಚಿವರು, ಬಿಜೆಪಿ ಭಾರತಕ್ಕೆ ನಿಷ್ಠವಾಗಿದ್ದರೆ, ಕಾಂಗ್ರೆಸ್‌ ಪಕ್ಷ ಬೇರೆ ದೇಶಗಳಿಗೆ ನಿಷ್ಠೆ ತೋರುತ್ತಿದೆ. ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ಕೂಟ ಸಾಮಾಜಿಕ ಅಭಿವೃದ್ಧಿಗೆ ನಿಷ್ಠೆ ತೋರುತ್ತಿಲ್ಲ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು