5:15 AM Sunday12 - July 2026
ಬ್ರೇಕಿಂಗ್ ನ್ಯೂಸ್
*ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ

ಇತ್ತೀಚಿನ ಸುದ್ದಿ

ಕಾಂಗ್ರೆಸ್‌ನ ಗೂಂಡಾಗಳಿಂದ ನಾರಾಯಣಸ್ವಾಮಿ ಮೇಲೆ ದಾಳಿ; ಸಚಿವ ಪ್ರಿಯಾಂಕ್‌ ಖರ್ಗೆ ಕೈವಾಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

22/05/2025, 20:17

ಬೆಂಗಳೂರು(reporterkarnataka.com): ಕಾಂಗ್ರೆಸ್‌ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್‌ ಖರ್ಗೆ ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ರಾಜಭವನದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ಕಾರಿನ ಮೇಲೆ ಕಾಂಗ್ರೆಸ್‌ ಗೂಂಡಾಗಳು ದಾಳಿ ಮಾಡಿದ್ದಾರೆ. ಸರ್ಕಾರ ಮಾಡಿರುವ ತಪ್ಪುಗಳ ವಿರುದ್ಧ ನಾರಾಯಣಸ್ವಾಮಿ ಮಾತಾಡಿದ್ದಾರೆ. ಆದರೆ ಅವರ ಮೇಲೆ ಹಲ್ಲೆ ಮಾಡಲು ಯತ್ನಿಸಲಾಗಿದೆ. ಇದೇ ರೀತಿ ಸಿ.ಟಿ.ರವಿ ಅವರ ಮೇಲೂ ದಾಳಿ ಮಾಡಲಾಗಿತ್ತು. ಪೊಲೀಸರು ನಾರಾಯಣಸ್ವಾಮಿ ಅವರಿಗೆ ರಕ್ಷಣೆ ನೀಡಿಲ್ಲ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಟ್ಟಿಲ್ಲ ಎಂದು ದೂರಿದರು.
ನಾರಾಯಣಸ್ವಾಮಿ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಕಾರಿನ ಮೇಲೆ ಬಣ್ಣ, ಮೊಟ್ಟೆ ಹಾಕಲಾಗಿದೆ. ಕೊಲೆ ಬೆದರಿಕೆ ಹಾಕಲಾಗಿದೆ. ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವುದು ಪ್ರತಿಪಕ್ಷ ನಾಯಕರ ಕರ್ತವ್ಯ. ಅದನ್ನು ಅವರು ಸರಿಯಾಗಿಯೇ ಮಾಡಿದ್ದಾರೆ. ನಾಯಿ ಬೊಗಳಿದರೆ ಸ್ವರ್ಗ ಹಾಳಾಗಲ್ಲ ಎಂಬುದು ಗಾದೆ ಮಾತು ಅಷ್ಟೆ. ಕಲಬುರ್ಗಿಯಲ್ಲಿ ಇದು ಹೊಸದಲ್ಲ. ಇದು ಪ್ರತಿ ದಿನದ ಕಾಯಕವಾಗಿದೆ. ಸಚಿವ ಪ್ರಿಯಾಂಕ್‌ ಖರ್ಗೆ ಇದರ ಹಿಂದೆ ಇದ್ದಾರೆ ಎಂದರು.
ಕಾಂಗ್ರೆಸ್‌ ಕಾರ್ಯಕರ್ತರಿಗೆ ಕಾನೂನು ಕೈಗೆ ತೆಗೆದುಕೊಳ್ಳುವ ಅಧಿಕಾರವನ್ನು ಯಾರು ನೀಡಿದ್ದಾರೆ? ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಗೂಂಡಾಗಿರಿ ಮಾಡುತ್ತಿದೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ. ನಾರಾಯಣಸ್ವಾಮಿ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು. ಪೊಲೀಸರು ಹಾಗೂ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು