6:34 AM Saturday26 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಗ್ಯಾರಂಟಿ ನೋಂದಣಿಗೆ ವಿಶೇಷ ಅಭಿಯಾನ: ಮೊದಲ ದಿನವೇ ಅಡ್ಯಾರ್ ಗ್ರಾಪಂ ವ್ಯಾಪ್ತಿಯಲ್ಲಿ ಬಾರಿ ಜನಸ್ಪಂದನೆ

04/03/2023, 20:44

ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಇಂದು ಆರಂಭವಾದ ಗ್ರಾಮ ಭೇಟಿ, ಕಾಂಗ್ರೆಸ್ ಗ್ಯಾರಂಟಿ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಜನರಿಂದ ಬಾರಿ ಸ್ಪಂದನೆ ವ್ಯಕ್ತವಾಗಿದೆ.
ಸಹಸ್ರಾರು ಕಾರ್ಯಕರ್ತರ ಜೊತೆ ಅಡ್ಯಾರ್ ಪರಿಸರದ ಪ್ರತೀ ಮನೆಗಳಿಗೆ ಭೇಟಿ ನೀಡುತ್ತಿರುವ ಇನಾಯತ್ ಅಲಿ ಅವರು ಕಾಂಗ್ರೆಸ್ ಪಕ್ಷ ಘೋಷಿಸಿರುವ ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಗ್ಯಾರಂಟಿ ಪತ್ರಗಳನ್ನು ವಿತರಿಸಿ ಹಾಗೂ ಜನರಿಗೆ ಅದರ ಬಗೆಗಿನ ಸಂಪೂರ್ಣ ಮಾಹಿತಿಯನ್ನು ವಿವರಿಸಿ ಕಾರ್ಯಕರ್ತರ ಮೂಲಕ ಗ್ಯಾರಂಟಿಗಾಗಿ ನೋಂದಾಯಿಸುತ್ತಿದ್ದಾರೆ.

ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲ ವಾರ್ಡ್ ಹಾಗೂ ಪಂಚಾಯತ್ ಗಳಲ್ಲಿ ಕಾಂಗ್ರೆಸ್ ಕೊಡುಗೆಗಳನ್ನು ಜನರಿಗೆ ತಲುಪಿಸುವ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇನಾಯತ್ ಅಲಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಈ ವಿನೂತನ ಕಾರ್ಯಕ್ರಮವು ಪಕ್ಷದ ಮೇಲೆ ಭರವಸೆ ಕಳೆದುಕೊಂಡಿರುವ ಕಾರ್ಯಕರ್ತರಿಗೂ ಸಾಕಷ್ಟು ಬಲ ತುಂಬಿದಂತಾಗಿದೆ. ಸುಡು ಬಿಸಿಲಿನ ಮಧ್ಯೆಯೂ ಕಾರ್ಯಕರ್ತರು ಬಹಳ ಹುಮ್ಮಸ್ಸಿನಿಂದ ಪಕ್ಷದ ಘೋಷಣೆಗಳೊಂದಿಗೆ ನಾಯಕರ ಜೊತೆ ಹೆಜ್ಜೆ ಹಾಕುತ್ತಿದ್ದಾರೆ.


ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಪ್ರಥ್ವಿರಾಜ್ ಆರ್.ಕೆ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಆಳ್ವ, ಕಾಂಗ್ರೆಸ್ ಮುಖಂಡರಾದ ಎಂ.ಜಿ.ಹೆಗ್ಡೆ, ಸದಾಶಿವ ಶೆಟ್ಟಿ, ಅಡ್ಯಾರ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಝೀನತ್, ಸದಸ್ಯರಾದ ದಾಮೋದರ ಶೆಟ್ಟಿ, ರೋನಾಲ್ಡ್ ಪಾಸ್ಕಲ್ ಸಲ್ದಾನ, ಫ್ಲಾವ್ಯ ಡಿಸೋಜ, ಅನಿತಾ ಡಿಸೋಜ, ಶಬೀರ್, ತುಳಸಿ, ಅಶ್ರಫ್, ಲವೀನಾ, ಖತೀಜ ಹಾಗೂ ಇನ್ನಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು