5:08 AM Thursday18 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಹಗರಣಗಳ ಸರದಾರ; ಮೇವು ತಿಂದೋರು ಜೈಲಿನಲ್ಲಿದ್ದಾರೆ, ಈಗ ಪೇಪರ್ ತಿಂದೋರು ಕೂಡ ಜೈಲಿಗೆ ಹೋಗುತ್ತಾರೆ: ಸಿ.ಟಿ.ರವಿ

13/06/2022, 20:00

ಬೆಂಗಳೂರು(reporterkarnataka.com): ಹಗರಣಗಳ ಸರದಾರ ಕಾಂಗ್ರೆಸ್ ಪಕ್ಷ. ಕಾಲಿನಿಂದ ತಲೆಯವರೆಗೂ ಹಗರಣ ಹೊದ್ದುಕೊಂಡಿರುವುದು ಕಾಂಗ್ರೆಸ್. ಮೇವು ತಿಂದವರು ಜೈಲಿನಲ್ಲಿದ್ದಾರೆ. ಈಗ ಪೇಪರ್ ತಿಂದವರು ಜೈಲಿಗೆ ಹೋಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯರ್ಶಿ ಸಿ.ಟಿ.ರವಿ ಭವಿಷ್ಯ ವ್ಯಂಗ್ಯವಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಸಂವಿಧಾನಕ್ಕಿಂತ ಮೇಲ್ಪಟ್ಟವರಾ? ಕಾಂಗ್ರೆಸ್​ನವರಿಗೆ ಭಯ ಯಾಕೆ? ಎಂದು ಪ್ರಶ್ನಿಸಿದರು.

ಇಂಡಿಯನ್ ಆಯಿಲ್ ಸ್ಕ್ಯಾಮ್, 2ಜಿ ಸ್ಪೆಕ್ಟ್ರಂ, ಆಗಸ್ಟಾ ವೆಸ್ಟ್​ಲ್ಯಾಂಡ್, ಕೆಜಿ ಬೇಸಿನ್ ಹಗರಣವನ್ನು ಕಾಂಗ್ರೆಸ್​ ​ಮಾಡಿದೆ. ಇದೀಗ ಭ್ರಷ್ಟಾಚಾರ ನಡೆಸಿದವರಿಗೆ ಭ್ರಷ್ಟಾಚಾರಿಗಳೇ ಬೆಂಬಲ ಕೊಡುತ್ತಿದ್ದಾರೆ. ಹಾಗಲಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಕಾಂಗ್ರೆಸ್​ನವರು ಬೀದಿಗಿಳಿದಿದ್ದಾರೆ. ಗಾಂಧಿ ಕುಟುಂಬದ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದೆ ಎಂದರು.

ಆಲೂಗಡ್ಡೆಯಲ್ಲಿ ಚಿನ್ನ ತೆಗೆಯೋದು ಹೇಗೆ ಅಂತ ರಾಹುಲ್ ಗಾಂಧಿ ಹೇಳಿದ್ದರು. 50 ಲಕ್ಷ ಹಾಕಿ ಸಾವಿರಾರು ಕೋಟಿ ಹಣ ಪಡೆಯೋದು ಎಂಬ ಬಗ್ಗೆ ಪಾಠ ಮಾಡಿದ್ದರು. ಇನ್ನೊಬ್ಬರು ಕೃಷಿ ಮಾಡಿ ಆಸ್ತಿ ಮಾಡಿದವರು. ಇದೀಗ ಅವರು ಬೇಲ್ ಮೇಲೆ ಹೊರಗಿದ್ದಾರೆ. ದಿನವೂ ಕೃಷಿ ಮಾಡುವ ರೈತರು ಕಷ್ಟದಲ್ಲಿದ್ದಾಗ ಇವರು ಮಾತ್ರ ಕೃಷಿಯಲ್ಲಿ ಸಾವಿರಾರು ಕೋಟಿ ಹಣ ಗಳಿಸಿದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು