8:33 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಹಗರಣಗಳ ಸರದಾರ; ಮೇವು ತಿಂದೋರು ಜೈಲಿನಲ್ಲಿದ್ದಾರೆ, ಈಗ ಪೇಪರ್ ತಿಂದೋರು ಕೂಡ ಜೈಲಿಗೆ ಹೋಗುತ್ತಾರೆ: ಸಿ.ಟಿ.ರವಿ

13/06/2022, 20:00

ಬೆಂಗಳೂರು(reporterkarnataka.com): ಹಗರಣಗಳ ಸರದಾರ ಕಾಂಗ್ರೆಸ್ ಪಕ್ಷ. ಕಾಲಿನಿಂದ ತಲೆಯವರೆಗೂ ಹಗರಣ ಹೊದ್ದುಕೊಂಡಿರುವುದು ಕಾಂಗ್ರೆಸ್. ಮೇವು ತಿಂದವರು ಜೈಲಿನಲ್ಲಿದ್ದಾರೆ. ಈಗ ಪೇಪರ್ ತಿಂದವರು ಜೈಲಿಗೆ ಹೋಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯರ್ಶಿ ಸಿ.ಟಿ.ರವಿ ಭವಿಷ್ಯ ವ್ಯಂಗ್ಯವಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಸಂವಿಧಾನಕ್ಕಿಂತ ಮೇಲ್ಪಟ್ಟವರಾ? ಕಾಂಗ್ರೆಸ್​ನವರಿಗೆ ಭಯ ಯಾಕೆ? ಎಂದು ಪ್ರಶ್ನಿಸಿದರು.

ಇಂಡಿಯನ್ ಆಯಿಲ್ ಸ್ಕ್ಯಾಮ್, 2ಜಿ ಸ್ಪೆಕ್ಟ್ರಂ, ಆಗಸ್ಟಾ ವೆಸ್ಟ್​ಲ್ಯಾಂಡ್, ಕೆಜಿ ಬೇಸಿನ್ ಹಗರಣವನ್ನು ಕಾಂಗ್ರೆಸ್​ ​ಮಾಡಿದೆ. ಇದೀಗ ಭ್ರಷ್ಟಾಚಾರ ನಡೆಸಿದವರಿಗೆ ಭ್ರಷ್ಟಾಚಾರಿಗಳೇ ಬೆಂಬಲ ಕೊಡುತ್ತಿದ್ದಾರೆ. ಹಾಗಲಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಕಾಂಗ್ರೆಸ್​ನವರು ಬೀದಿಗಿಳಿದಿದ್ದಾರೆ. ಗಾಂಧಿ ಕುಟುಂಬದ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದೆ ಎಂದರು.

ಆಲೂಗಡ್ಡೆಯಲ್ಲಿ ಚಿನ್ನ ತೆಗೆಯೋದು ಹೇಗೆ ಅಂತ ರಾಹುಲ್ ಗಾಂಧಿ ಹೇಳಿದ್ದರು. 50 ಲಕ್ಷ ಹಾಕಿ ಸಾವಿರಾರು ಕೋಟಿ ಹಣ ಪಡೆಯೋದು ಎಂಬ ಬಗ್ಗೆ ಪಾಠ ಮಾಡಿದ್ದರು. ಇನ್ನೊಬ್ಬರು ಕೃಷಿ ಮಾಡಿ ಆಸ್ತಿ ಮಾಡಿದವರು. ಇದೀಗ ಅವರು ಬೇಲ್ ಮೇಲೆ ಹೊರಗಿದ್ದಾರೆ. ದಿನವೂ ಕೃಷಿ ಮಾಡುವ ರೈತರು ಕಷ್ಟದಲ್ಲಿದ್ದಾಗ ಇವರು ಮಾತ್ರ ಕೃಷಿಯಲ್ಲಿ ಸಾವಿರಾರು ಕೋಟಿ ಹಣ ಗಳಿಸಿದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು