8:54 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಹಗರಣಗಳ ಸರದಾರ; ಮೇವು ತಿಂದೋರು ಜೈಲಿನಲ್ಲಿದ್ದಾರೆ, ಈಗ ಪೇಪರ್ ತಿಂದೋರು ಕೂಡ ಜೈಲಿಗೆ ಹೋಗುತ್ತಾರೆ: ಸಿ.ಟಿ.ರವಿ

13/06/2022, 20:00

ಬೆಂಗಳೂರು(reporterkarnataka.com): ಹಗರಣಗಳ ಸರದಾರ ಕಾಂಗ್ರೆಸ್ ಪಕ್ಷ. ಕಾಲಿನಿಂದ ತಲೆಯವರೆಗೂ ಹಗರಣ ಹೊದ್ದುಕೊಂಡಿರುವುದು ಕಾಂಗ್ರೆಸ್. ಮೇವು ತಿಂದವರು ಜೈಲಿನಲ್ಲಿದ್ದಾರೆ. ಈಗ ಪೇಪರ್ ತಿಂದವರು ಜೈಲಿಗೆ ಹೋಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯರ್ಶಿ ಸಿ.ಟಿ.ರವಿ ಭವಿಷ್ಯ ವ್ಯಂಗ್ಯವಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಸಂವಿಧಾನಕ್ಕಿಂತ ಮೇಲ್ಪಟ್ಟವರಾ? ಕಾಂಗ್ರೆಸ್​ನವರಿಗೆ ಭಯ ಯಾಕೆ? ಎಂದು ಪ್ರಶ್ನಿಸಿದರು.

ಇಂಡಿಯನ್ ಆಯಿಲ್ ಸ್ಕ್ಯಾಮ್, 2ಜಿ ಸ್ಪೆಕ್ಟ್ರಂ, ಆಗಸ್ಟಾ ವೆಸ್ಟ್​ಲ್ಯಾಂಡ್, ಕೆಜಿ ಬೇಸಿನ್ ಹಗರಣವನ್ನು ಕಾಂಗ್ರೆಸ್​ ​ಮಾಡಿದೆ. ಇದೀಗ ಭ್ರಷ್ಟಾಚಾರ ನಡೆಸಿದವರಿಗೆ ಭ್ರಷ್ಟಾಚಾರಿಗಳೇ ಬೆಂಬಲ ಕೊಡುತ್ತಿದ್ದಾರೆ. ಹಾಗಲಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಕಾಂಗ್ರೆಸ್​ನವರು ಬೀದಿಗಿಳಿದಿದ್ದಾರೆ. ಗಾಂಧಿ ಕುಟುಂಬದ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದೆ ಎಂದರು.

ಆಲೂಗಡ್ಡೆಯಲ್ಲಿ ಚಿನ್ನ ತೆಗೆಯೋದು ಹೇಗೆ ಅಂತ ರಾಹುಲ್ ಗಾಂಧಿ ಹೇಳಿದ್ದರು. 50 ಲಕ್ಷ ಹಾಕಿ ಸಾವಿರಾರು ಕೋಟಿ ಹಣ ಪಡೆಯೋದು ಎಂಬ ಬಗ್ಗೆ ಪಾಠ ಮಾಡಿದ್ದರು. ಇನ್ನೊಬ್ಬರು ಕೃಷಿ ಮಾಡಿ ಆಸ್ತಿ ಮಾಡಿದವರು. ಇದೀಗ ಅವರು ಬೇಲ್ ಮೇಲೆ ಹೊರಗಿದ್ದಾರೆ. ದಿನವೂ ಕೃಷಿ ಮಾಡುವ ರೈತರು ಕಷ್ಟದಲ್ಲಿದ್ದಾಗ ಇವರು ಮಾತ್ರ ಕೃಷಿಯಲ್ಲಿ ಸಾವಿರಾರು ಕೋಟಿ ಹಣ ಗಳಿಸಿದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು