6:53 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಹಗರಣಗಳ ಸರದಾರ; ಮೇವು ತಿಂದೋರು ಜೈಲಿನಲ್ಲಿದ್ದಾರೆ, ಈಗ ಪೇಪರ್ ತಿಂದೋರು ಕೂಡ ಜೈಲಿಗೆ ಹೋಗುತ್ತಾರೆ: ಸಿ.ಟಿ.ರವಿ

13/06/2022, 20:00

ಬೆಂಗಳೂರು(reporterkarnataka.com): ಹಗರಣಗಳ ಸರದಾರ ಕಾಂಗ್ರೆಸ್ ಪಕ್ಷ. ಕಾಲಿನಿಂದ ತಲೆಯವರೆಗೂ ಹಗರಣ ಹೊದ್ದುಕೊಂಡಿರುವುದು ಕಾಂಗ್ರೆಸ್. ಮೇವು ತಿಂದವರು ಜೈಲಿನಲ್ಲಿದ್ದಾರೆ. ಈಗ ಪೇಪರ್ ತಿಂದವರು ಜೈಲಿಗೆ ಹೋಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯರ್ಶಿ ಸಿ.ಟಿ.ರವಿ ಭವಿಷ್ಯ ವ್ಯಂಗ್ಯವಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಸಂವಿಧಾನಕ್ಕಿಂತ ಮೇಲ್ಪಟ್ಟವರಾ? ಕಾಂಗ್ರೆಸ್​ನವರಿಗೆ ಭಯ ಯಾಕೆ? ಎಂದು ಪ್ರಶ್ನಿಸಿದರು.

ಇಂಡಿಯನ್ ಆಯಿಲ್ ಸ್ಕ್ಯಾಮ್, 2ಜಿ ಸ್ಪೆಕ್ಟ್ರಂ, ಆಗಸ್ಟಾ ವೆಸ್ಟ್​ಲ್ಯಾಂಡ್, ಕೆಜಿ ಬೇಸಿನ್ ಹಗರಣವನ್ನು ಕಾಂಗ್ರೆಸ್​ ​ಮಾಡಿದೆ. ಇದೀಗ ಭ್ರಷ್ಟಾಚಾರ ನಡೆಸಿದವರಿಗೆ ಭ್ರಷ್ಟಾಚಾರಿಗಳೇ ಬೆಂಬಲ ಕೊಡುತ್ತಿದ್ದಾರೆ. ಹಾಗಲಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಕಾಂಗ್ರೆಸ್​ನವರು ಬೀದಿಗಿಳಿದಿದ್ದಾರೆ. ಗಾಂಧಿ ಕುಟುಂಬದ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದೆ ಎಂದರು.

ಆಲೂಗಡ್ಡೆಯಲ್ಲಿ ಚಿನ್ನ ತೆಗೆಯೋದು ಹೇಗೆ ಅಂತ ರಾಹುಲ್ ಗಾಂಧಿ ಹೇಳಿದ್ದರು. 50 ಲಕ್ಷ ಹಾಕಿ ಸಾವಿರಾರು ಕೋಟಿ ಹಣ ಪಡೆಯೋದು ಎಂಬ ಬಗ್ಗೆ ಪಾಠ ಮಾಡಿದ್ದರು. ಇನ್ನೊಬ್ಬರು ಕೃಷಿ ಮಾಡಿ ಆಸ್ತಿ ಮಾಡಿದವರು. ಇದೀಗ ಅವರು ಬೇಲ್ ಮೇಲೆ ಹೊರಗಿದ್ದಾರೆ. ದಿನವೂ ಕೃಷಿ ಮಾಡುವ ರೈತರು ಕಷ್ಟದಲ್ಲಿದ್ದಾಗ ಇವರು ಮಾತ್ರ ಕೃಷಿಯಲ್ಲಿ ಸಾವಿರಾರು ಕೋಟಿ ಹಣ ಗಳಿಸಿದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು