4:56 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ವಿಪಕ್ಷ ಉಪನಾಯಕ ಯು.ಟಿ ಖಾದರ್

31/01/2022, 17:59

ಬಂಟ್ವಾಳ(Reporterkarnataka.com) ಕರ್ನಾಟಕ ವಿಧಾನ ಸಭೆಯ ಪತಿಪಕ್ಷದ ಉಪನಾಯಕನನ್ನಾಗಿ ಆಯ್ಕೆ ಮಾಡಿದ ಬಳಿಕ ಅವರಿಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದುಕೊಂಡರು.

ಬಳಿಕ ಮಾತನಾಡಿದ ಅವರು, ಪ್ರಮಾಣಿಕತೆಯಿಂದ ಕರ್ತವ್ಯ ನಿಭಾಯಿಸಿ ಇಡೀ ರಾಜ್ಯ ಹಾಗೂ ಕ್ಷೇತ್ರದ ಜನರಿಗೆ ಗೌರವ ತರುವ ಕೆಲಸ ಮಾಡುತ್ತೇವೆ. ಈ ಜವಾಬ್ದಾರಿ ತನ್ನ ಕ್ಷೇತ್ರದ ಮತದಾರರಿಗೆ ಸಂದ ಗೌರವಾಗಿದೆ ಎಂದು ಹೇಳಿದರು.

ತನ್ನ ಆಯ್ಕೆಗೆ ಕಾರಣರಾದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ, ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೇರಿದಂತೆ ಎಲ್ಲಾ ಹಿರಿಯ-ಕಿರಿಯ ನಾಯಕರಿಗೆ ಕ್ಷೇತ್ರದ ಜನರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇವೆ. ಪಕ್ಷಕ್ಕೆ ನನ್ನಿಂದಾಗುವ ಸಹಕಾರ ನೀಡುತ್ತೇನೆ.

ತಾನು ವಿದ್ಯಾರ್ಥಿಯಾಗಿದ್ದಾಗ ಹಿರಿಯ ನಾಯಕ ಜನಾರ್ದನ ಪೂಜಾರಿಯವರು ತನ್ನನ್ನು ಮೊದಲ ಬಾರಿಗೆ ಎನ್‌ಎಸ್‌ಯುಐನ ಕಾರ್ಯದರ್ಶಿಯನ್ನಾಗಿ ಮಾಡಿದ್ದರು. ಹೀಗಾಗಿ ಅವರ ಆಶೀರ್ವಾದ ಪಡೆದಿದ್ದೇನೆ. ಜತೆಗೆ ಜಿಲ್ಲೆಯ ಎಲ್ಲಾ ಹಿರಿಯ-ಕಿರಿಯ ಮುಖಂಡರುಗಳ ಆಶೀರ್ವಾದವನ್ನು ಕೇಳುತ್ತಿದ್ದೇನೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು