1:05 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ವಿಪಕ್ಷ ಉಪನಾಯಕ ಯು.ಟಿ ಖಾದರ್

31/01/2022, 17:59

ಬಂಟ್ವಾಳ(Reporterkarnataka.com) ಕರ್ನಾಟಕ ವಿಧಾನ ಸಭೆಯ ಪತಿಪಕ್ಷದ ಉಪನಾಯಕನನ್ನಾಗಿ ಆಯ್ಕೆ ಮಾಡಿದ ಬಳಿಕ ಅವರಿಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದುಕೊಂಡರು.

ಬಳಿಕ ಮಾತನಾಡಿದ ಅವರು, ಪ್ರಮಾಣಿಕತೆಯಿಂದ ಕರ್ತವ್ಯ ನಿಭಾಯಿಸಿ ಇಡೀ ರಾಜ್ಯ ಹಾಗೂ ಕ್ಷೇತ್ರದ ಜನರಿಗೆ ಗೌರವ ತರುವ ಕೆಲಸ ಮಾಡುತ್ತೇವೆ. ಈ ಜವಾಬ್ದಾರಿ ತನ್ನ ಕ್ಷೇತ್ರದ ಮತದಾರರಿಗೆ ಸಂದ ಗೌರವಾಗಿದೆ ಎಂದು ಹೇಳಿದರು.

ತನ್ನ ಆಯ್ಕೆಗೆ ಕಾರಣರಾದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ, ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೇರಿದಂತೆ ಎಲ್ಲಾ ಹಿರಿಯ-ಕಿರಿಯ ನಾಯಕರಿಗೆ ಕ್ಷೇತ್ರದ ಜನರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇವೆ. ಪಕ್ಷಕ್ಕೆ ನನ್ನಿಂದಾಗುವ ಸಹಕಾರ ನೀಡುತ್ತೇನೆ.

ತಾನು ವಿದ್ಯಾರ್ಥಿಯಾಗಿದ್ದಾಗ ಹಿರಿಯ ನಾಯಕ ಜನಾರ್ದನ ಪೂಜಾರಿಯವರು ತನ್ನನ್ನು ಮೊದಲ ಬಾರಿಗೆ ಎನ್‌ಎಸ್‌ಯುಐನ ಕಾರ್ಯದರ್ಶಿಯನ್ನಾಗಿ ಮಾಡಿದ್ದರು. ಹೀಗಾಗಿ ಅವರ ಆಶೀರ್ವಾದ ಪಡೆದಿದ್ದೇನೆ. ಜತೆಗೆ ಜಿಲ್ಲೆಯ ಎಲ್ಲಾ ಹಿರಿಯ-ಕಿರಿಯ ಮುಖಂಡರುಗಳ ಆಶೀರ್ವಾದವನ್ನು ಕೇಳುತ್ತಿದ್ದೇನೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು