12:29 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ

05/07/2025, 00:24

* ದೇಶದಲ್ಲಿ ವಿರೋಧ ಪಕ್ಷವಾಗಿದ್ದೇ ಪುಣ್ಯ

* ಆರೆಸ್ಸೆಸ್‌ ನೂರು ವರ್ಷ ಪೂರೈಸುತ್ತಿದೆ, ಇನ್ನೂ ಬೆಳೆಯುತ್ತದೆ

* ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ʼಆರೆಸ್ಸೆಸ್‌ ಬ್ಯಾನ್‌ʼ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆಗೆ ಜೋಶಿ ತಿರುಗೇಟು

ಬೆಂಗಳೂರು(reporterkarnataka.com): ʼದೇಶದಲ್ಲಿ ಕಾಂಗ್ರೆಸ್‌ ಅತಿ ದೊಡ್ಡ ವಿರೋಧ ಪಕ್ಷವಾಗಿದ್ದೇ ಪುಣ್ಯ, ಇನ್ನು ದೇಶದ ಆಡಳಿತ ಚುಕ್ಕಾಣಿ ಹಿಡಿಯುವುದು ಹಾಗೂ ಆರೆಸ್ಸೆಸ್‌ ಅನ್ನು ಬ್ಯಾನ್‌ ಮಾಡುವುದು ಹಗಲುಗನಸುʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಚಾಟಿ ಬೀಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ದೇಶದಲ್ಲಿ ಆರೆಸ್ಸೆಸ್‌ ಅನ್ನು ಬ್ಯಾನ್‌ ಮಾಡಲು ಖರ್ಗೆ ಅವರ ಲೀಡರ್‌ ರಾಹುಲ್‌ ಗಾಂಧಿ, ಇವರ ಅಜ್ಜಿ, ಮುತ್ತಾತರೆಲ್ಲಾ ಪ್ರಯತ್ನ ಮಾಡಿ ವಿಫಲರಾದರು. ಈ ದೇಶದಲ್ಲಿ ಆರೆಸ್ಸೆಸ್‌ ಇನ್ನೂ ವಿಸ್ತಾರವಾಗಿ ಬೆಳೆಯುತ್ತದೆ ಎಂದು ತೀಕ್ಷಣ ಪ್ರತಿಕ್ರಿಯೆ ನೀಡಿದರು.
ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್‌ ಬ್ಯಾನ್‌ ಆಗುತ್ತದೆ ಎದಿರುವ ಪ್ರಿಯಾಂಕ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಜೋಶಿ, ದೇಶದಲ್ಲಿ ಆರ್‌ಎಸ್‌ಎಸ್‌ ಸಂಘಟನೆಯನ್ನು ನಿಷೇಧಿಸುವ ಕನಸು ಕಾಣುತ್ತಿದ್ದಾರೆ ಪ್ರಿಯಾಂಕ ಖರ್ಗೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಂದಿರುವುದು ಅವರ ಹತಾಶೆಯನ್ನು ತೋರ್ಪಡಿಸುತ್ತದೆ ಎಂದು ಹೇಳಿದರು.
ದೇಶದಲ್ಲ ಇನ್ನು ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ದೂರದ ಮಾತು. ʼನಾವು ಅಧಿಕಾರಕ್ಕೆ ಬಂದರೆ ಬ್ಯಾನ್‌ʼ ಎಂದಿದ್ದಾರೆ, ಖರ್ಗೆ ಹೀಗೇ ಹಗಲು ಗನಸು ಕಾಣುತ್ತಲೇ ಇರಲಿ. ಕಾಂಗ್ರೆಸ್‌ ಅತಿ ದೊಡ್ಡ ವಿರೋಧ ಪಕ್ಷವಾಗಿದ್ದೇ ನಿಮ್ಮ ಪುಣ್ಯ. ಭವಿಷ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ ಬಿಡಿ ಎಂದು ಜೋಶಿ ಚಾಟಿ ಬೀಸಿದರು.
1975ರಲ್ಲಿ ಆರೆಸ್ಸೆಸ್‌ ಅನ್ನು ಬ್ಯಾನ್‌ ಮಾಡಲು ಅವರ ಸರ್ಕಾರವೇ ಮುಂದಾಯಿತು. ಆದರೆ, ಅವರ ಸರ್ಕಾರವೇ ಹೋಯಿತು. ನೆಹರು ಅವರು ಆರೆಸ್ಸೆಸ್‌ ಅನ್ನು ಬ್ಯಾನ್‌ ಮಾಡಿದ ನಂತರ ಆಯೋಗ ರಚನೆ ಮಾಡಲಾಯಿತು. ಆಯೋಗ ಯವುದೇ ರೀತಿಯ ಸಾಕ್ಷಿಗಳಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಇತಿಹಾಸ ಅರಿಯದ ಪ್ರಿಯಾಂಕ ಖರ್ಗೆ ತಮ್ಮ ಅನುಕೂಲಕ್ಕೆ ಬೇಕಾದ್ದನ್ನು ಅಷ್ಟೇ ಹೇಳುತ್ತಾರೆ, ಉಳಿದದ್ದನ್ನೆಲ್ಲ ಮರೆಮಾಚುತ್ತಾರೆ ಎಂದು ಆರೋಪಿಸಿದರು.

*ಆರೆಸ್ಸೆಸ್‌ ಮತ್ತಷ್ಟು ಬೆಳೆಯುತ್ತದೆ:* ಆರೆಸ್ಸೆಸ್‌ ಬ್ಯಾನ್‌ ಮಾಡುವ ಕಾಲ ಮುಗಿದಿದೆ. ನಮ್ಮ ಬಂಧನ ಎಲ್ಲದೂ ಆಗಿ ಹೋಗಿದೆ. ಇನ್ನು ಯಾರೂ ಏನೂ ಮಾಡಲು ಆಗುವುದಿಲ್ಲ. ಆರೆಸ್ಸೆಸ್‌ ನೂರು ವರ್ಷ ಪೂರೈಸುತ್ತಿದೆ. ಮತ್ತಷ್ಟು ಬೆಳೆಯುತ್ತಾ ಹೋಗುತ್ತದೆ. ದೇಶದ ಜನ ಆರೆಸ್ಸೆಸ್‌ ಮತ್ತು ಬಿಜೆಪಿ ವಿಚಾರಧಾರೆಗಳನ್ನು ಒಪ್ಪಿಕೊಂಡಿದ್ದಾರೆ. ನಿಮ್ಮ ವಿಚಾರಧಾರೆಗಳನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದರು.

*ವಾಲ್ಮೀಕಿ ಹಗರಣ ವಿಷಯಾಂತರಕ್ಕೆ ಯತ್ನ:* ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ವಾಲ್ಮೀಕಿ ಹಗರಣದಲ್ಲಿ ಸಿಬಿಐ ತನಿಖೆ ಎದುರಿಸುವುದು ಸುದ್ದಿಯಾಗುತ್ತಲೇ ಅದನ್ನು ಮಾರೆಮಾಚಲು ಏನೆಲ್ಲಾ ಪ್ರಯತ್ನ ಮಾಡುತ್ತಿದೆ. ಎಂಎಲ್‌ಸಿ ರವಿಕುಮಾರ್‌ ವಿಚಾರವನ್ನು ಮುನ್ನಲೆಗೆ ತರುತ್ತಿದ್ದಾರೆ ಎಂದು ಸಚಿವ ಪ್ರಲ್ಹಾದ ಜೋಶಿ ಹರಿಹಾಯ್ದರು.
ರಾಜ್ಯ ಮುಖ್ಯ ಕಾರ್ಯದರ್ಶಿ ವಿಚಾರದಲ್ಲಿ ಎಂಎಲ್ಸಿ ರವಿಕುಮಾರ್‌ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೂ ಸರ್ಕಾರ ಎಫ್‌ಐಆರ್‌ ದಾಖಲಿಸಿದೆ. ತನಿಖೆ ನಡೆಸಲಿ. ಆದರೆ, ಕಾಂಗ್ರೆಸ್ ಸರ್ಕಾರ ತಮ್ಮ ಹುಳುಕು ಮುಚ್ಚಿಕೊಳ್ಳಲು ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಅಷ್ಟೇ ಎಂದರು.

*ಐಎಎಸ್‌, ಐಪಿಎಸ್‌ ಅಧಿಕಾರಿಗಳನ್ನು ಸಿಎಂ ಅಪಮಾನಿಸಲಿಲ್ಲವೇ?:* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಐಎಎಸ್‌, ಐಪಿಎಸ್‌ ಅಧಿಕಾರಿಗಳನ್ನು ಅಪಮಾನಿಸಲಿಲ್ಲವೇ? ಜಿಲ್ಲಾಧಿಕಾರಿಗೆ, ಎಸಿಪಿ ಅವರಿಗೆ ವೇದಿಕೆ ಮೇಲೆ ಬಹಿರಂಗವಾಗಿಯೇ ಅವಮಾನ ಮಾಡಿದರು. ಹಲವಾರು ಬಾರಿ ಅಧಿಕಾರಿಗಳಿಗೆ ಸಿಎಂರಿಂದ ಅವಮಾನ ಆಗಿದೆ. ಆಗೇಕೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲಿಲ್ಲ? ಎಂದು ಪ್ರಲ್ಹಾದ ಜೋಶಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು