12:07 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಅಂಬೇಡ್ಕರ್‌ ಗೆ ಜೀವಮಾನವಿಡಿ ಕಾಂಗ್ರೆಸ್‌ ಅಪಮಾನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

25/03/2025, 17:58

* ಸಂವಿಧಾನ ಬದಲಿಸುವ ಹೆಳಿಕೆಗೆ ಡಿಕೆ ಶಿವಕುಮಾರ್‌ ಮೊದಲು ಕ್ಷಮೆಯಾಚಿಸಲು ಆಗ್ರಹ*

ನವದೆಹಲಿ(reporterkarnataka.com): ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‌ ಪಕ್ಷ ಜೀವಮಾನವಿಡಿ ಅಪಮಾನಿಸುತ್ತಲೇ ಬಂದಿದೆ. ಈಗಲೂ ಅದನ್ನೇ ಮುಂದುವರಿಸಿದೆ. ಇದಕ್ಕಾಗಿ ಕಾಂಗ್ರೆಸ್‌ ಪಕ್ಷ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ದೇಶದ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದರು.
ದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್‌ ಅನೇಕ ಬಾರಿ ಸಂವಿಧಾನಕ್ಕೆ ಅಪಚಾರ ಮಾಡುತ್ತಲೇ ಇದೆ. ಇದು ಅವರ ಹಿಡನ್‌ ಅಜೆಂಡಾ ಆಗಿದೆ. ಅಂಬೇಡ್ಕರ್‌ ಜೀವಿತಾವಧಿಯಲ್ಲಿ ಪ್ರತಿ ಹಂತದಲ್ಲೂ ಅವರನ್ನು ಅವಮಾನಿಸಿದೆ. ಚುನಾವಣೆಯಲ್ಲಿ ಷಡ್ಯಂತ್ರ ನಡೆಸಿ ಸೋಲಿಸಿತು. ಆರ್ಟಿಕಲ್‌ ೩೫೦ ದುರುಪಯೋಗ ಪಡಿಸಿಕೊಂಡಿತು ಎಂದು ಆರೋಪಿಸಿದರು.
ಹಲವು ಬಾರಿ ಸಂವಿಧಾನ ತಿದ್ದುಪಡಿ ಮಾಡಿದ ಕಾಂಗ್ರೆಸ್‌, ಈಗ ಮತ್ತೆ ಡಿ.ಕೆ. ಶಿವಕುಮಾರ್‌ ಮೂಲಕ ತನ್ನ ಗುಪ್ತ ಕಾರ್ಯಸೂಚಿಯನ್ನು ಬಹಿರಂಗಪಡಿಸಿದೆ. ಕಾಂಗ್ರೆಸ್‌ ಯಾವತ್ತೂ ಅಂಬೇಡ್ಕರ್‌ ಅವರನ್ನು ಗೌರವಿಸಿಲ್ಲ. ಬದಲಾಗಿ ಅಪಮಾನ ಮಾಡುತ್ತಲೇ ಬಂದಿದೆ ಎಂದು ಕಿಡಿ ಕಾರಿದ ಸಚಿವ ಜೋಶಿ, ೧೯೫೧ರ ಚುನಾವಣೆ ಮೊದಲು ಮತ್ತು ತುರ್ತು ಪರಿಸ್ಥಿತಿ ವೇಳೆ ಹೀಗೆ ಎಲ್ಲ ಸಂದರ್ಭದಲ್ಲೂ ಕಾಂಗ್ರೆಸ್‌ ಹೇಗೆ ನಡೆದುಕೊಂಡಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಎಂದು ಹೇಳಿದರು.
ಈಗ ಕರ್ನಾಟಕದಲ್ಲಿ ಮುಸ್ಲಿಂರಿಗೆ ಶೇ.೪ರಷ್ಟು ಮೀಸಲಾತಿ ಕಲ್ಪಿಸಿರುವ ಕಾಂಗ್ರೆಸ್, ಮುಂದೊಂದು ದಿನ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದಿದೆ. ತನ್ನ ಮತ ಬ್ಯಾಂಕ್‌ಗಾಗಿ ಹಿಂದುಳಿದ ಸಮುದಾಯದವರಿಗೆ ತೀವ್ರ ಅನ್ಯಾಯ ಮಾಡುತ್ತಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಮತ್ತು ಡಿಕೆ ಶಿವಕುಮಾರ್ ಕೂಡಲೇ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಪ್ರಲ್ಹಾದ ಜೋಶಿ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು