8:36 PM Thursday9 - July 2026
ಬ್ರೇಕಿಂಗ್ ನ್ಯೂಸ್
ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:…

ಇತ್ತೀಚಿನ ಸುದ್ದಿ

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ

14/12/2025, 22:17

ಹಾವೇರಿ(reporterkarnataka.com): ಓಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್ ನವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ‌. ಅದರಿಂದ ಏನೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಓಟ್ ಚೋರಿ ಸುಳ್ಳನ್ನು ಸತ್ಯ ಮಾಡುವ ಅಭಿಯಾನ ಬಹಳಷ್ಟು ಕಾಂಗ್ರೆಸ್ ನಾಯಕರಿಗೆ ಅದರ ಬಗ್ಗೆ ನಂಬಿಕೆ ಇಲ್ಲ. ಅವರ ಪ್ರತಿಷ್ಠೆಗೆ ಅಲ್ಲಿಗೆ ಹೋಗುತ್ತಿದ್ದಾರೆ. ಸುಳ್ಳು ಸಾವಿರ ಬಾರಿ ಹೇಳಿ ಸತ್ಯ ಮಾಡಲು ಹೊರಟವರ ಮೇಲೆ ಕಾಂಗ್ರೆಸ್ ನವರಿಗೆ ನಂಬಿಕೆ ಇದೆ. ಅದರಿಂದ ಏನೂ‌ ಆಗಲ್ಲ. ಬಿಹಾರ್ ನಲ್ಲಿ ಇದನ್ನೇ ಮುಂದಿಟ್ಟುಕೊಂಡು ಚುನಾವಣೆ ಮಾಡಿದರು. ಅಲ್ಲಿ ಕಾಂಗ್ರೆಸ್ ಅತ್ಯಂತ ಕಡಿಮೆ ಸ್ಥಾನ ಪಡೆಯಿತು. ಅದರಿಂದ ಇನ್ನೂ ಪಾಠ ಕಲಿತಿಲ್ಲ ಅಂದರೆ ಏನು ಮಾಡಲು ಆಗುವುದಿಲ್ಲ ಎಂದು ನುಡಿದರು.

*ಸತ್ಯ ಹೊರಬರುತ್ತದೆ:*
ಆಳಂದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತಿದಾರ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚಾರ್ಜ್ ಶೀಟ್ ಸಲ್ಲಿಸಿದ ತಕ್ಷಣ ಏನೂ ಆಗಲ್ಲ. ಕೋರ್ಟ್ ನಲ್ಲಿ ಸಾಬೀತಾಗಬೇಕು. ಯಾವ ಸಂದರ್ಭದಲ್ಲಿ ಎಸ್ ಐ ಟಿ ರಚನೆ ಆಗಿದೆ. ಎಸ್ ಐಟಿ ಯಾವ ರೀತಿ ತನಿಖೆ ಮಾಡಿದೆ. ಇಲೆಕ್ಷನ್ ಕಮಿಷನ್ ಆಗಲೇ ಸ್ಪಷ್ಟನೆ ನೀಡಿದೆ. ಆರು ಸಾವಿರ ಮತ ಕಡಿತ ಮಾಡುವಂತೆ ಅರ್ಜಿ ಬಂದರೂ ಕೇವಲ 18 ಮತ ಕಡಿತ ಮಾಡಿದ್ದಾರೆ. ಹೀಗಾಗಿ ಕೋರ್ಟ್ ನಲ್ಲಿ ಸತ್ಯ ಹೊರಬರುತ್ತದೆ. ಚುನಾವಣಾ ಆಯೋಗದ ಪಾತ್ರ ಏನು ಸತ್ಯಾಂಶ ಏನು ಎಲ್ಲವೂ ಹೊರ ಬರುತ್ತದೆ ಎಂದು ಹೇಳಿದರು.

*ನೈತಿಕ ಪೊಲೀಸ್ ಗಿರಿ ಒಪ್ಪುವುದಿಲ್ಲ:*
ಸವಣೂರಿನಲ್ಲಿ ಶಿಕ್ಷಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನೈತಿಕ ಪೊಲಿಸ್ ಗಿರಿ ಒಪ್ಪುವುದಿಲ್ಲ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಅದರ ಬದಲು ರಸ್ತೆಯಲ್ಕಿ ಮೆರವಣಿಗೆ ಮಾಡಿ ಬಟ್ಟೆ ಹರಿಯುವುದು ಸರಿಯಲ್ಲ. ಅಮಾನವೀಯವಾಗಿ ಮಾಡುವ ಕೃತ್ಯಕ್ಕೆ ಅವಕಾಶ ಕೊಡಬಾರದು. ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿ ಕಾನೂನು ಕೈ ತೆಗೆದುಕೊಂಡಿದ್ದಾರೆ. ಆತ ತಪ್ಪು ಮಾಡಿದ್ದರೆ ಶಿಕ್ಷೆ ಆಗಬೇಕು. ಅದಕ್ಕಿಂತ ಮುಂಚೆ ಬೀದಿ ಬೀದಿಗಳಲ್ಲಿ ಮೆರವಣಿಗೆ ಮಾಡಿರುವುದು ಅನಾಗರಿಕತೆ. ಪ್ರಜಾಪ್ರಭುತ್ವದಲ್ಲಿ ಇದಕ್ಕೆ ಅವಕಾಶ ಇಲ್ಲ. ಇಲ್ಲಿ ಪೊಲೀಸರು ನಿಷ್ಕ್ರಿಯ ಆಗಿದ್ದಾರೆ. ಅವರ ನಿರ್ಲಕ್ಷ್ಯದಿಂದ ಇದೆಲ್ಲಾ ಆಗಿದೆ. ಹಲವು ರೇಪ್ ಪ್ರಕರಣಗಳು ನಡೆದರೂ ಪುಂಡ ಪೋಕರಿಗಳನ್ನೇ ಹಿಡಿದಿಲ್ಲ. ಕಾನೂನು ಉಲ್ಲಂಘನೆ ಮಾಡುವವರಿಗೆ ಪ್ರೋತ್ಸಾಹ ಕೊಟ್ಟಿದ್ದಕ್ಕೆ ಇಂತಹ ಪ್ರಕರಣ ನಡೆಯುತ್ತಿವೆ. ಹೀಗಾಗಿ ಇದೆಲ್ಲಾ ಆಗುತ್ತಿದೆ. ಇಲ್ಲದಿದ್ದರೆ ಇದನ್ನು ತಡೆಯಬಹುದಿತ್ತು ಒಂದು ವರ್ಗ ಓಲೈಸುವ ಕೆಲಸದ ಪರಿಣಾಮ ಈ ರೀತಿ ನಡೆದಿದೆ ಓಲೈಕೆ ರಾಜಕಾರಣದ ಪ್ರತಿಬಿಂಬ ಇದು ಎಂದು ಆರೋಪಿಸಿದರು.
ಸ್ಥಳೀಯ ಶಾಸಕರು ಕೆಲವರು ನೀರು ಹಾಕುತ್ತಾರೆ, ಕೆಲವರು ಪೆಟ್ರೋಲ್ ಹಾಕುತ್ತಾರೆ ಎಂದು ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರು ನೀರು ಹಾಕುತ್ತಾರೆ, ಯಾರು ಪೆಟ್ರೋಲ್ ಹಾಕುತ್ತಾರೆ ಎಂದು ಶಾಸಕರೇ ಹೇಳಬೇಕು. ನಾವು ಆರೋಪಿ ಪರ ಮಾತನಾಡುತ್ತಿಲ್ಲ. ತಪ್ಪು ಮಾಡಿದವರನ್ನೆಲ್ಲ ಚಪ್ಪಲಿಯಲ್ಲಿ ಹೊಡೆಯುತ್ತಾರಾ? ಹಾನಗಲ್ ನಲ್ಲಿ ರೇಪ್ ಮಾಡಿದವರನ್ನು ಚಪ್ಪಲೊಯಲ್ಲಿಯೇ ಹೊಡೆದು ಕರೆದುಕೊಂಡು ಹೋಗಿದ್ದರಾ ಎಂದು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು