3:53 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಜತೆ ಬಿಜೆಪಿ ಹೊಂದಾಣಿಕೆ ರಾಜಕಾರಣ ಮಾಡುತ್ತೇ?: ಸಂಸದ ಪ್ರತಾಪ್ ಸಿಂಹ ಸ್ವಪಕ್ಷೀಯ ನಾಯಕ ವಿರುದ್ದವೇ ಮಾಡಿದ ಆರೋಪ ಏನು?

13/06/2023, 22:07

ಬೆಂಗಳೂರು(reporterkarnataka.com): ಬಿಜೆಪಿ ಅಧಿಕಾರದಲ್ಲಿದ್ದಾಗ ಪಕ್ಷದ ಅತಿರಥ ಮಹಾರಥ ನಾಯಕರು ಮಾಡಿದ ಹೊಂದಾಣಿಕೆ ರಾಜಕಾರಣದಿಂದ ಪಕ್ಷಕ್ಕೆ ಈ ಸ್ಥಿತಿ ಬಂತು ಎಂದು ಸ್ವಪಕ್ಷೀಯ ನಾಯಕರ ವಿರುದ್ಧವೇ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಎಗರಾಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಈ ಮುನ್ನ ಹೊಂದಾಣಿಕೆ ರಾಜಕಾರಣದ ಬಗ್ಗೆ ಧ್ವನಿ ಎತ್ತಿದ್ದರು. ಇದೀಗ ಸಂಸದ ಪ್ರತಾಪ ಸಿಂಹ ಅವರು ಸಿ.ಟಿ. ರವಿ ಅಭಿಪ್ರಾಯಕ್ಕೆ ಧ್ವನಿಗೂಡಿಸಿದ್ದಾರೆ.
ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಹೊಂದಾಣಿಕೆ ರಾಜಕಾರಣ ನಡೆದಿತ್ತು. ಅರ್ಕಾವತಿ ಡಿ ನೋಟಿಪಿಕೇಶನ್ ಬಗ್ಗೆಯಾಗಲಿ, ರೀಡೂ ಕುರಿತಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಹಾವಿನ ಪೆಟ್ಟಿಗೆಯಲ್ಲಿ ಹಾವಿದೆ ಎಂದು ಹೇಳಿದ್ದೇ ಹೊರತು ಹಾವನ್ನು ಹೊರತೆಗೆಯುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡಿಲ್ಲ. ನನ್ನ ಬೆನ್ನು ನೀನು ಕೆರಿ, ನಿನ್ನ ಬೆನ್ನು ನಾನು ಕೆರಿತ್ತೀನಿ ಅಂತ ಬಿಜೆಪಿ ನಾಯಕರು ಕಾಂಗ್ರೆಸ್ ಜತೆ
ಹೊಂದಾಣಿಕೆ ಮಾಡಿಕೊಂಡಿದ್ದರು. ಇದೀಗ ಕಾಂಗ್ರೆಸ್ ಸರಕಾರದ ಪರಿಸ್ಥಿತಿಯೂ ಅದೇ ಆಗಿದೆ. ಚುನಾವಣೆಯ ಸಮಯದಲ್ಲಿ ಪಿಎಸ್ ಐ ಹಗರಣ, 40 ಪರ್ಸಂಟ್, ಬಿಟ್ ಕಾಯಿನ್ ಹಗರಣ ಎಂದೆಲ್ಲ ಹೇಳಿದರು. ಈಗ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳಾಗುತ್ತಾ ಬಂತು. ಯಾಕೆ ಇವರು ಈ ಹಗರಣಗಳ ಬಗ್ಗೆ ತನಿಖೆ ನಡೆಸುತ್ತಿಲ್ಲ? ಸಿದ್ದರಾಮಯ್ಯ ಅವರು ಕೂಡ ಹೊಂದಾಣಿಕೆ ರಾಜಕಾರಣದಲ್ಲಿ ಶಾಮೀಲಾಗಿದ್ದಾರೆಯೇ? ನಮ್ಮ ನಾಯಕರು ನಿಮ್ಮ ಜತೆ ಹೊಂದಾಣಿಕೆ ರಾಜಕಾರಣದಲ್ಲಿ ಶಾಮೀಲಾಗಬಹುದು. ಆದರೆ ನಮ್ಮ ಕಾರ್ಯಕರರು ನಿಮ್ಮ ಜತೆ ಶಾಮೀಲಾಗುವುದಿಲ್ಲ. ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಪ್ರತಾಪ್ ಸಿಂಹ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು